ಕಾರವಾರ: ಕೋವಿಡ್-19 ಮುಂಜಾಗೃತೆ ಕ್ರಮವಾಗಿ ಹಾಗೂ ಅದನ್ನು ಸಮರ್ಪಕವಾಗಿ ನಿಯಂತ್ರಿಸಲು ಜೂ.1ರಿಂದ 5ರ ವರೆಗೆ ಹೊರ ದೇಶ, ರಾಜ್ಯ ಹಾಗೂ ಜಿಲ್ಲೆಗಳಿಂದ ಬಂದ ವ್ಯಕ್ತಿಗಳ ಸಮೀಕ್ಷೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಉತ್ತರಕನ್ನಡ ಜಿಲ್ಲಾಧಿಕಾರಿಗಳ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಹೊರ ಜಿಲ್ಲೆ, ರಾಜ್ಯ, ಹಾಗೂ ಹೊರದೇಶಗಳಿಂದ ಬಂದಿರುವ ಪ್ರಯಾಣಿಕರ ಆರೋಗ್ಯ ಸಮೀಕ್ಷೆಯನ್ನು ತೀವ್ರತರವಾಗಿ ಬೃಹತ್ ಪ್ರಮಾಣದಲ್ಲಿ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದ್ದು ಸಾರ್ವಜನಿಕರು ಆರೋಗ್ಯ ಕಾರ್ಯಕರ್ತರಿಗೆ ಸರಿಯಾದ ಮಾಹಿತಿ ನೀಡಬೇಕೆಂದು ಅವರು ಪತ್ರಿಕಾಪ್ರಕಟಣೆಯಲ್ಲಿ ಆದೇಶಿಸಿದ್ದಾರೆ.