ವಿಷಾಹಾರ ಸೇವನೆ: 130ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥ; ಆಸ್ಪತ್ರೆಗೆ ದಾಖಲು, ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜ್ ಹಾಸ್ಟೆಲ್‌ನಲ್ಲಿ ಘಟನೆ

Source: Vb | By I.G. Bhatkali | Published on 7th February 2023, 9:46 AM | Coastal News | State News |

ಮಂಗಳೂರು: ನಗರದ ಸಿಟಿ ಆಸ್ಪತ್ರೆಯ ಅಧೀನದಲ್ಲಿರುವ ನರ್ಸಿಂಗ್ ಕಾಲೇಜಿಗೆ ಸೇರಿದ ಹೋಸ್ಟಲುಂದರಲ್ಲಿ ವಿಷಾಹಾರ ಸೇವನೆಯಿಂದ ಅಸ್ವಸ್ಥಗೊಂಡರೆನ್ನಾಲಾದ 130ಕ್ಕೂ ಅಧಿಕ ವಿದ್ಯಾರ್ಥಿನಿಯರನ್ನು ಸೋಮವಾರ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ದ.ಕ. ಜಿಲ್ಲೆ ಹಾಗೂ ಕೇರಳ ಮತ್ತಿತರ ಕಡೆಯ ವಿದ್ಯಾರ್ಥಿನಿಯರೂ ಅಸ್ವಸ್ಥಗೊಂಡಿದ್ದಾರೆ. ಕೆಲವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದರೆ, ಇನ್ನು ಕೆಲವರನ್ನು 'ಬೆಡ್'ಗಳ ಕೊರತೆಯಿಂದ ಹೊರವಲಯದ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಎರಡು ದಿನದಿಂದ ಕಲುಷಿತ ನೀರು ಮತ್ತು ಆಹಾರ ಸೇವಿಸಿದ ಬಳಿಕ ಆರೋಗ್ಯದ ಸಮಸ್ಯೆ ಕಾಡಿದೆ. ಕೆಲವರಿಗೆ ಹೊಟ್ಟೆನೋವು, ವಾಂತಿ, ಭೇದಿ ಆಗಿದ್ದು, ಸೋಮವಾರ ಮುಂಜಾವದಿಂದಲೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಜೆಯ ವೇಳೆ ಅಸ್ವಸ್ಥಗೊಂಡ ವಿದ್ಯಾರ್ಥಿನಿಯರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಎಂದು ಹೆಸರು ಹೇಳಲು ಇಚ್ಛಿಸದ ವಿದ್ಯಾರ್ಥಿನಿಯರು ಘಟನೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿಯು ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡದ ಕಾರಣ ಇತರ ವಿದ್ಯಾರ್ಥಿಗಳು ಮತ್ತು ಪೋಷಕರು ಆಸ್ಪತ್ರೆಯ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಸೋಮವಾರ ರಾತ್ರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು 'ಸೋಮವಾರ ಮುಂಜಾವ ಸುಮಾರು 2 ಗಂಟೆಗೆ ಕೆಲವು ವಿದ್ಯಾರ್ಥಿನಿಯರಿಗೆ ಹೊಟ್ಟೆನೋವು, ಭೇದಿ ಶುರುವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ಬಳಿಕ ಅಸ್ವಸ್ಥಗೊಂಡ ವಿದ್ಯಾರ್ಥಿನಿಯರ ಸಂಖ್ಯೆಯೂ ಹೆಚ್ಚಾಯಿತು. ಅವರನ್ನೆಲ್ಲಾ ನಗರದ ಎಜೆ, ಕೆಎಂಸಿ, ಫಾದರ್ ಮುಲ್ಲರ್ ಸಹಿತ ಕೆಲವು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆಗೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು' ಎಂದಿದ್ದಾರೆ.

Read These Next

ಎರಡು ವರ್ಷಗಳಿಂದ ಮೃತ ಮೀನುಗಾರ ಕುಟುಂಬಕ್ಕೆ ಪರಿಹಾರವಿಲ್ಲ. ಅಧಿಕಾರಿಗಳ ಉತ್ತರಕ್ಕೆ ಸಚಿವ ಮಂಕಾಳ ವೈದ್ಯ ಅಸಮಧಾನ.

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷದಲ್ಲಿ ಮೃತಪಟ್ಟಿರುವ 40 ಮೀನುಗಾರ ಕುಟುಂಬಕ್ಕೆ ಸಂಕಷ್ಟ ಪರಿಹಾರ ನಿಧಿಯಿಂದ ...

ಪಕ್ಷದ ಕಾರ್ಯಕರ್ತರ ಹಿತಕಾಪಾಡಲು ಕುಮಟಾ ಕ್ಷೇತ್ರದಲ್ಲೇ ವಾಸ್ತವ್ಯ: ನಿವೇದಿತ್ ಆಳ್ವಾ

ಹೊನ್ನಾವರ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಗೆಲುವಿಗಾಗಿ ಹಗಲು-ರಾತ್ರಿ ಪರಿಶ್ರಮಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಹಿತ ...

ಎದ್ದೇಳು ಕರ್ನಾಟಕದ ಪ್ರತಿನಿಧಿಗಳ ತಂಡದಿಂದ ಮುಖ್ಯಮಂತ್ರಿಗಳೊಂದಿಗೆ ಭೇಟಿ ಮತ್ತು ಸಂವಾದ

ಬೆಂಗಳೂರು: ಎದ್ದೇಳು ಕರ್ನಾಟಕದ ಕಾರ್ಯಕಾರಿ ಸಮಿತಿಯ ಪ್ರತಿನಿಧಿಗಳು ಮತ್ತು ವಿವಿಧ ಸಮುದಾಯಗಳ ಸಂಘಟನೆಗಳ ಮುಂದಾಳುಗಳ ನಿಯೋಗವು ...

ಉಡಾಫೆ, ಅಸಡ್ಡೆ ಮಾಡುವ ಅಧಿಕಾರಿಗಳಿಗೆ ಜಾಗ ಇಲ್ಲ. ಅಧಿಕಾರಿಗಳ ಸಭೆಯಲ್ಲಿ ಖಡಕ್ ಎಚ್ಚರಿಕೆ ನೀಡಿದ ಸಿ.ಎಂ. ಸಿದ್ದರಾಮಯ್ಯ

ದಾವಣಗೆರೆ : ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರಾಗಿದ್ದು ಜನರ ಆಶೋತ್ತರಗಳಿಗೆ ಸ್ಪಂಧಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ...