ಟಿ.ಹೆಚ್. ನಟರಾಜ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕರು
ಕಾರವಾರ: ಜಿಲ್ಲಾ ಕೃಷಿ ಇಲಾಖೆ ಉಪ ನಿರ್ದೇಶಕ ಟಿ.ಎಚ್. ನಟರಾಜ ಅವರನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕರನ್ನಾಗಿ ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಅವರು ಆದೇಶ ಹೊರಡಿಸಿದ್ದಾರೆ.
ಶಿರಸಿ ಕೃಷಿ ಇಲಾಖೆ ಉಪನಿರ್ದೇಶಕ ಟಿ. ಹೆಚ್. ನಟರಾಜ ಅವರು ತಮ್ಮ ಹುದ್ದೆಯ ಜೊತೆಗೆ ಕಾರವಾರ ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನು ಮುಂದಿನ ಆದೇಶವರೆಗೆ ನಿರ್ವಹಿಸಲು ಜಿಲ್ಲಾಧಿಕಾರಿ ಆದೇಶಿಸಿರುತ್ತಾರೆ.