ನಿಝಾಮುದ್ದೀನ್ ಮರ್ಕಝ್ ಖಾಲಿ ಮಾಡಿಸುವಾಗ ತಬ್ಲೀಗಿಗಳು ಒಮ್ಮೆಯೂ ಕೆಟ್ಟದಾಗಿ ವರ್ತಿಸಿಲ್ಲ: ಡಾ. ಊರ್ವಿ ಶರ್ಮ

Source: sonews | By Staff Correspondent | Published on 5th April 2020, 6:05 PM | National News | Special Report |

ದಿಲ್ಲಿಯ ನಿಝಾಮುದ್ದೀನ್ ಮರ್ಕಝ್ ನ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಂದ ದೇಶದ ವಿವಿಧೆಡೆಗೆ ಕೊರೊನ ಹರಡಿತು ಎಂಬ ಮಾಧ್ಯಮ ವರದಿಗಳ ಬೆನ್ನಿಗೇ ಟಿವಿ ಚಾನಲ್ ಗಳು ಹಾಗು ಸಾಮಾಜಿಕ ಜಾಲತಾಣಗಳಲ್ಲಿ ತಬ್ಲೀಗಿ ಜಮಾಅತ್ ನ ಸದಸ್ಯರ ವಿರುದ್ಧ ಭಾರೀ ಅಪಪ್ರಚಾರದ ಅಭಿಯಾನವೇ ನಡೆಯುತ್ತಿದೆ.

ತಬ್ಲೀಗಿ ಜಮಾಅತ್ ನವರು ಮರ್ಕಝ್ ಖಾಲಿ ಮಾಡಲು ಒಪ್ಪಲಿಲ್ಲ ಎಂಬಲ್ಲಿಂದ ಪ್ರಾರಂಭಿಸಿ ಅವರು ಕ್ವಾರಂಟೈನ್ ನಲ್ಲಿ ನಿಯಮ ಉಲ್ಲಂಘಿಸುತ್ತಿದ್ದಾರೆ, ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿಯೊಂದಿಗೆ ಕೆಟ್ಟದಾಗಿ ವರ್ತಿಸುತ್ತಿದ್ದಾರೆ, ಕಂಡಕಂಡಲ್ಲಿ ಉಗುಳಿ ಕೊರೊನ ಹರಡುತ್ತಿದ್ದಾರೆ, ಮಹಿಳಾ ಸಿಬ್ಬಂದಿ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದಾರೆ.... ಹೀಗೆ ಅವರನ್ನು ಅಪರಾಧಿಗಳಾಗಿ ಘೋಷಿಸುವ ರೋಚಕ ಕತೆಗಳು ವ್ಯಾಪಕವಾಗಿ ಹರಡುತ್ತಿವೆ. 

ಈ ನಡುವೆ ಇಂತಹ ಒಂದೊಂದೇ ಕತೆಗಳು ಒಂದೋ ಅರ್ಧ ಸತ್ಯ ಅಥವಾ ಹಸಿ ಸುಳ್ಳು ಎಂಬಂತಹ ವರದಿಗಳೂ ಬರುತ್ತಿವೆ. ನಿರೀಕ್ಷೆಯಂತೆ ಹೆಚ್ಚಿನ ಮಾಧ್ಯಮಗಳು ಈ ಸುದ್ದಿಗಳನ್ನು ಪ್ರಕಟಿಸುತ್ತಿಲ್ಲ. ಉತ್ತರ ಪ್ರದೇಶದ ಸಹರಾನ್ ಪುರದಲ್ಲಿ ಕ್ವಾರಂಟೈನ್ ನಲ್ಲಿರುವ ತಬ್ಲೀಗಿ ಜಮಾಅತ್ ಸದಸ್ಯರು ಮಾಂಸಾಹಾರಕ್ಕೆ ಹಠ ಹಿಡಿದಿದ್ದಾರೆ ಎಂಬುದು ಸುಳ್ಳು ಸುದ್ದಿ ಎಂದು ಅಲ್ಲಿನ ಪೊಲೀಸರೇ ಹೇಳಿಕೆ ನೀಡಿದ್ದಾರೆ. 

ಈಗ ದಿಲ್ಲಿಯ ಮಹಿಳಾ ವೈದ್ಯರೊಬ್ಬರ ಟ್ವೀಟ್ ಗಳು ವೈರಲ್ ಆಗುತ್ತಿವೆ. "ನಿಝಾಮುದ್ದೀನ್ ಮರ್ಕಝ್ ಖಾಲಿ ಮಾಡಿಸುವಾಗ ನಾನೂ ಅಲ್ಲಿ ಕರ್ತವ್ಯದಲ್ಲಿದ್ದೆ. ಅಲ್ಲಿದ್ದ ತಬ್ಲೀಗಿಗಳು ಒಮ್ಮೆಯೂ ಯಾರ ಜೊತೆಯೂ ಅನುಚಿತವಾಗಿ ವರ್ತಿಸಿಲ್ಲ" ಎಂದು ಊರ್ವಿ ಶರ್ಮ ರೈನಾ ಎಂಬ ವೈದ್ಯೆ ಶುಕ್ರವಾರ  ಮೊದಲು ಟ್ವೀಟ್ ಮಾಡಿದ್ದರು. 

ಶನಿವಾರ ಮತ್ತೆ ಟ್ವೀಟ್ ಮಾಡಿರುವ ಊರ್ವಿ ಶರ್ಮ ಅವರು " ನಾನು ಮುಂಚೂಣಿಯಲ್ಲಿರುವಾಗ ಕಂಡಿದ್ದನ್ನು ಜನರಿಗೆ ತಿಳಿಸುವುದು ಅನಿವಾರ್ಯವಾಗಿತ್ತು. ಎಲ್ಲಾದರೂ ಯಾರಿಂದಲಾದರೂ ಕೆಟ್ಟ ವರ್ತನೆ ಕಂಡು ಬಂದಿದ್ದಲ್ಲಿ ನಾನು ಅದನ್ನು ಖಂಡಿತ ಸಮರ್ಥಿಸುವುದಿಲ್ಲ. ಆದರೆ ಎಲ್ಲೋ ಆಗಿರುವ ಘಟನೆಯನ್ನು ಎಲ್ಲೋ ಆದ ಘಟನೆ ಎಂದೇ ನೋಡಬೇಕೇ ವಿನಃ ಅದನ್ನು ಇಡೀ ಸಮುದಾಯದ ಮೇಲೆ ಹೊರಿಸಲು ಹೋಗಬಾರದು " ಎಂದು ಸ್ಪಷ್ಟವಾಗಿ ಹೇಳಿದ್ದಾರೆ. 

ತಬ್ಲೀಗಿಗಳು ವೈದ್ಯರ ಜೊತೆ ಸಹಕರಿಸಿಲ್ಲ ಎಂಬ ವರದಿಗಳು ಒಂದು ವೇಳೆ ನಿಜವಾಗಿದ್ದರೂ ಅವರು ಮಹಿಳೆಯರೊಂದಿಗೆ ಕೆಟ್ಟದಾಗಿ ವರ್ತಿಸಿದರು ಎಂದು ನಂಬಲು ಅವರ ಕಟು ಟೀಕಾಕಾರರೂ ಸಿದ್ಧರಿಲ್ಲ. ಏಕೆಂದರೆ ತಬ್ಲೀಗಿಗಳು ಮಹಿಳೆಯರ ಜೊತೆ ಮಾತನಾಡುವುದು, ಕೆಟ್ಟದಾಗಿ ವರ್ತಿಸುವುದು ಹಾಗಿರಲಿ. ಅವರು ಕುಟುಂಬದವರಲ್ಲದ ಮಹಿಳೆಯರನ್ನು ಕಣ್ಣೆತ್ತಿಯೂ ನೋಡುವುದಿಲ್ಲ. ಆ ನಿಯಮವನ್ನು ಅವರು ಅತ್ಯಂತ ಕಟ್ಟುನಿಟ್ಟಾಗಿ ಪಾಲಿಸುತ್ತಾರೆ ಎಂಬುದು ಸಾಮಾನ್ಯವಾಗಿ ತಬ್ಲೀಗಿಗಳ ಬಗ್ಗೆ ತಿಳಿದವರಿಗೆ ಚೆನ್ನಾಗಿ ಗೊತ್ತಿದೆ. ಅದಕ್ಕೆ ಪೂರಕವಾಗಿ ಈಗ ಡಾ.ಊರ್ವಿ ಶರ್ಮ ಅವರ ಹೇಳಿಕೆ ಬಂದಿದೆ. 

ಕೃಪೆ:vbnewsonline.in

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...