ರಾಜ್ಯಾದ್ಯಂತ ಮಳೆ, ಮುಂಜಾಗ್ರತಾ ಕ್ರಮ ಕೈಗೊಳ್ಳಿ; 50 ಕೋಟಿ ರೂ. ಬಿಡುಗಡೆಗೆ ಬಿಎಸ್‌ವೈ ಸೂಚನೆ

Source: uni | Published on 6th August 2020, 12:23 AM | State News | Don't Miss |

 

ಬೆಂಗಳೂರು: ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು‌ ವಹಿಸುವಂತೆ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸೂಚನೆ ನೀಡಿದರು.
ಮಳೆಯ ಬಗ್ಗೆ ಕ್ಷಣ ಕ್ಷಣದ ಮಾಹಿತಿಯನ್ನು ತೆಗೆದುಕೊಳ್ಳುವುದು ಸೇರಿದಂತೆ ಎಲ್ಲಾ ಜಿಲ್ಲಾಧಿಕಾರಿ ಗಳ ಜೊತೆ ನಿರಂತರ ಸಂಪರ್ಕ ದಲ್ಲಿರುವಂತೆ ಸೂಚನೆ ನೀಡಿದ್ದಾರೆ.
ತುರ್ತು ಸಂದರ್ಭಕ್ಕಾಗಿ ಕೂಡಲೇ 50 ಕೋಟಿ‌ ಹಣವನ್ನು ಬಿಡುಗಡೆ ಮಾಡುವಂತೆ ಸೂಚನೆ‌ ನೀಡಿದರು. ಕೆಲ‌ ಜಿಲ್ಲಾಧಿಕಾರಿಗಳ ಜತೆ ಪೋನ್ ಮುಖಾಂತರ ಸಂಪರ್ಕ ಮಾಡಿದ‌‌ ಮುಖ್ಯಮಂತ್ರಿ ಯಡಿಯೂರಪ್ಪ, ಮಳೆಯ ಬಗ್ಗೆ ಮಾಹಿತಿಯನ್ನು ‌ಪಡೆದುಕೊಂಡರು.
ದರ್ಶನ್‌ ಸಾಧನೆಗೆ ಬಿಎಸ್‌ವೈ ಮೆಚ್ಚುಗೆ: ಇದರ ಜೊತೆಗೆ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ದರ್ಶನ್ ಅವರಿಗೆ ಕರೆ ಮಾಡಿ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಬಿಎಸ್‌ವೈ ಆರೋಗ್ಯ ಸ್ಥಿರ
ಈ ನಡುವೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಆರೋಗ್ಯ ಸ್ಥಿತಿ ಸುಧಾರಣೆಯಾಗಿದೆ. ಈಗಾಗಲೇ ಎಲ್ಲ ಚಿಕಿತ್ಸೆ ನಡೆಸಲಾಗಿದ್ದು, ನಾರ್ಮಲ್‌ ಆಗಿದ್ದಾರೆ. ತಮ್ಮ ದೈನಂದಿನ ಕೆಲಸ ಕಾರ್ಯಗಳಲ್ಲಿ ತೊಡಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ

Read These Next

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ “ಸಹಾಯವಾಣಿ”

ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ...