ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಟಿ.ಬಿ.ಹರಿಕಾಂತ್ ಮರು ಆಯ್ಕೆ

Source: sonews | By Staff Correspondent | Published on 1st August 2020, 6:48 PM | Coastal News |

ಕಾರವಾರ: ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ಮುಂದಿನ ಒಂದು ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆ ಶನಿವಾರ ಜರಗಿದ್ದು ಹಿರಿಯ ಪತ್ರಕರ್ತ ಟಿ.ಬಿ.ಹರಿಕಾಂತ್ ಜಿಲ್ಲಾಧ್ಯಕ್ಷರಾಗಿ ಮರು ಆಯ್ಕಯಾಗಿದ್ದಾರೆ.   

ಜಿಲ್ಲಾ ಪತ್ರಿಕಾ ಭವನದ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

2020- 21ನೇ ಸಾಲಿಗೆ ಅಧ್ಯಕ್ಷರಾಗಿ ಕರಾವಳಿ ಮುಂಜಾವು ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಟಿ.ಬಿ.ಹರಿಕಾಂತ್ ಅವರು ಪುನರಾಯ್ಕೆ ಆಗಿದ್ದಾರೆ. ನ್ಯೂಸ್ 18 ಕನ್ನಡ ವಾಹಿನಿಯ ವರದಿಗಾರ ದರ್ಶನ್ ನಾಯ್ಕ ಅವರ್ಸಾ ಹಾಗೂ ಕಡಲವಾಣಿ ಪತ್ರಿಕೆಯ ವರದಿಗಾರ ಅರವಿಂದ್ ಗುನಗಿ ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ದಿಗ್ವಿಜಯ ವಾಹಿನಿಯ ವರದಿಗಾರ ಶೇಷಗಿರಿ ಮುಂಡಳ್ಳಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ, ಈಟಿವಿ ಭಾರತ್ ಕನ್ನಡದ ಜಿಲ್ಲಾ ವರದಿಗಾರ ವಾಸುದೇವ ಗೌಡ ಉಡಳ್ಳಿ ಅವರನ್ನು ಸಂಘಟನಾ ಕಾರ್ಯದರ್ಶಿಯನ್ನಾಗಿ ಹಾಗೂ ಖಜಾಂಚಿಯನ್ನಾಗಿ ಸುಭಾಷ್ ಧೂಪದಹೊಂಡ ಅವರನ್ನು ಆಯ್ಕೆ ಮಾಡಲಾಗಿದೆ.

ಹಿರಿಯ ಪತ್ರಕರ್ತರಾದ ರಾಮಾ ನಾಯ್ಕ ಹಾಗೂ ಪಿ.ಕೆ.ಚಾಪಗಾಂವ್ಕರ್ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯ ನೇತೃತ್ವ ವಹಿಸಿಕೊಂಡಿದ್ದರು. ಪತ್ರಕರ್ತರಾದ ವಸಂತಕುಮಾರ್ ಕತಗಾಲ್, ಸಂದೀಪ್ ಸಾಗರ್, ಎಸ್.ಎಸ್.ಸಂದೀಪ್, ಗುರುಪ್ರಸಾದ್ ಹೆಗಡೆ, ಅಚ್ಯುತ್ ಕುಮಾರ್, ರವಿ ಗೌಡ, ಸುನೀಲ್ ನಾಯ್ಕ ಹಣಕೋಣ, ದೇವರಾಜ ನಾಯ್ಕ, ಗಣೇಶ್ ಹೆಗಡೆ, ದಿನೇಶ್ ಹಿತ್ತಲದವರ್, ಪ್ರಶಾಂತ್ ಮಹಾಲೆ, ಕಿಶನ್ ಗುರವ್, ದಿಲೀಪ್ ರೇವಣಕರ್ ಹಾಜರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...