ಆಂಧ್ರಪ್ರದೇಶದಲ್ಲಿ ಹಿಂಸಾಚಾರಕ್ಕೆ ತಿರುಗಿದ ಚುನಾವಣೆ: ಟಿಡಿಪಿ, ವೈಎಸ್​ಆರ್​ ಪಕ್ಷಗಳ ಇಬ್ಬರು ಕಾರ್ಯಕರ್ತರ ಸಾವು

Source: so news | By MV Bhatkal | Published on 12th April 2019, 12:24 AM | National News |


ಅನಂತಪುರ: ಆಂಧ್ರಪ್ರದೇಶದಲ್ಲಿ ಲೋಕಸಭಾ ಚುನಾವಣೆ ಮತದಾನ ಹಿಂಸಾಚಾರಕ್ಕೆ ತಿರುಗಿದ್ದು ಈ ಗಲಾಟೆಯಲ್ಲಿ ಟಿಡಿಪಿ ಕಾರ್ಯಕರ್ತ ಸಿದ್ಧ ಭಾಸ್ಕರ್​ ರೆಡ್ಡಿ ಹಾಗೂ ವೈಎಸ್​ಆರ್​ ಕಾರ್ಯಕರ್ತ ಪುಲ್ಲಾರೆಡ್ಡಿ ಮೃತಪಟ್ಟಿದ್ದಾರೆ.
ಅನಂತಪುರ ಜಿಲ್ಲೆಯ ತಾಡಪತ್ರಿ ಕ್ಷೇತ್ರದ ಮೀರಾಪುರಂನ ಮತಗಟ್ಟೆ 197ರಲ್ಲಿ ಈ ದುರ್ಘಟನೆ ಸಂಭವಿಸಿದೆ.
ಆಂಧ್ರಪ್ರದೇಶದಲ್ಲಿ ಮೊದಲು ಶಾಂತಿಯುತವಾಗಿಯೇ ಮತದಾನ ಪ್ರಾರಂಭವಾಯಿತು. ಅಧಿಕ ಸಂಖ್ಯೆಯಲ್ಲಿ ಮತದಾರರೂ ಮುಂಜಾನೆಯೇ ಆಗಮಿಸಿದರು. ಆದರೆ ಗುಂಟೂರು ಮತ್ತು ಚಿತ್ತೂರಿನಲ್ಲಿ ಮಾತ್ರ ವೈಎಸ್​ಆರ್​ ಹಾಗೂ ಟಿಡಿಪಿ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಬೆಳೆದು ಅದು ನಂತರ ಹಿಂಸಾಚಾರಕ್ಕೆ ತಿರುಗಿತು. ಇವಿಎಂಗಳೂ ನಾಶಗೊಂಡವು.
ಮೀರಾಪುರಂ ಗ್ರಾಮದ ಮತಗಟ್ಟೆಯ ಬಳಿ ಎರಡೂ ಪಕ್ಷಗಳ ಕಾರ್ಯಕರ್ತರ ವಾಗ್ವಾದ ತೀವ್ರಗೊಂಡು ಪರಸ್ಪರ ಕಲ್ಲು ತೂರಾಟ ನಡೆಸಿಕೊಂಡಿದ್ದಾರೆ

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...