ಕುಮಟಾ: ಟೆಂಪೆÇವೊಂದು ಪಲ್ಟಿಯಾಗಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಹಂದಿಗೋಣ ಸರಕಾರಿ ಶಾಲಾ ಸಮೀಪ ಮಂಗಳವಾರ ಮದ್ಯಾಹ್ನ ನಡೆದಿದೆ.
ಹೊನ್ನಾವರದಿಂದ ಕುಮಟಾ ಮಾರ್ಗವಾಗಿ ಬರುತ್ತಿದ್ದ ಟೆಂಪೊ ಹಂದಿಗೋಣ ಶಾಲಾ ಸಮೀಪ ಪಲ್ಟಿಯಾಗಿದ್ದು, ಪ್ರಯಾಣಿಕರಿಗೆ ತಲೆ, ಕೈ ಹಾಗೂ ಕಾಲುಗಳಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ವಾಹನದಲ್ಲಿ 21 ಮಂದಿ ಪ್ರಯಾಣಿಕರಿದ್ದು, ಗಾಯಾಳುಗಳಾದ ಪ್ರಶಾಂತ ನಾಯಕ ಕೋಡ್ಕಣಿ ಅವರನ್ನು ಹೆಚ್ಚಿನ ಚಿಕಿತ್ಸೆಗೆಗಾಗಿ ಮಣಿಪಾಲ ಹಾಗೂ ಲೋಕರಾಜ್ ಜೈನ್ ಗುಂಡಬಾಳ, ರೇವತಿ ಭಂಡಾರಿ ಹೊಳೆಗದ್ದೆ ಅವರನ್ನು ಹೊನ್ನಾವರ ಸೇಂಟ್ ಇಗ್ನೇಷಿಯಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದೆಲ್ಲ ಗಾಯಾಳುಗಳನ್ನು ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅದೃಷ್ಟವಶಾತ್
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸ್ಥಳಕ್ಕೆ ಕುಮಟಾ ಸಿಪಿಐ ಪರಮೇಶ್ವರ ಗುನಗ ಹಾಗೂ ಅಪರಾಧ ವಿಭಾಗದ ಪಿಎಸ್ಐ ಸುಧಾ ಅಘನಾಶಿನಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read These Next
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...