ಭಟ್ಕಳ: ಧಾರಕಾರ ಮಳೆಗೆ ಕೊಚ್ಚಿಹೋದ ಅಳ್ವೆಕೋಡಿಗೆ ಸಂಪರ್ಕಿಸುವ ಪಳ್ಳಿಹಕ್ಕಲ್ ಸೇತುವೆ

Source: sonews | By Staff Correspondent | Published on 8th June 2018, 10:27 PM | Coastal News | State News | Don't Miss |

ಭಟ್ಕಳ: ಶಿರಾಲಿಯಿಂದ ಅಳ್ವೆಕೋಡಿಗೆ ಸಂಪರ್ಕಿಸುವ ಪಳ್ಳಿಹಕ್ಕಲ್ ಸೇತುವೆ ನಿರ್ಮಾಣ ಹಂತದಲ್ಲಿದ್ದು ತಾತ್ಕಾಲಿಕವಾಗಿ ನಿರ್ಮಿಸಿದ ಸೇತುವೆ ಮಳೆಯಿಂದಾಗಿ ಕೊಚ್ಚಿ ಹೋಗಿದ್ದು ಈಗ ಶಿರಾಲಿಯಿಂದ ಪಳ್ಳಿಹಕ್ಕಲ್ ಹಾಗೂ ಅಳ್ವೆಕೋಡಿಗೆ ಸಂಪರ್ಕ ಕಡಿತಕೊಂಡಿದೆ. ಅಳ್ವೆಕೋಡಿ ಹಾಗೂ ಪಳ್ಳಿಹಕ್ಕಲ್ ಜನತೆ ಸಂಪೂರ್ಣವಾಗಿ ಭಟ್ಕಳ ಹಾಗೂ ಶಿರಾಲಿಯಿಂದ ಸಂಪರ್ಕ ಕಡಿದುಕೊಂಡಂತಾಗಿದ್ದು ಬಹಳಷ್ಟು ತೊಂದರೆಯನ್ನು ಅನುಭವಿಸುವಂತಾಗಿದೆ.

ಭಟ್ಕಳ ತಾಲೂಕಿನಾದ್ಯಂತ ಗುರುವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ  ಗ್ರಾಮೀಣ ಭಾಗದ ನದಿ, ಹೊಳೆ, ಹಳ್ಳಗಳು ತುಂಬಿ ತುಳುಕುತ್ತಿದ್ದು  ಶಿರಾಲಿಯಿಂದ ಅಳ್ವೆಕೋಡಿಗೆ ಸಂಪರ್ಕ ಕಲ್ಪಿಸುವ ಪಳ್ಳಿಹಕ್ಕಲ್ ಹೊಳೆಯ ಸೇತುವೆ ನಿರ್ಮಾಣಕ್ಕೆ ಕಳೆದ ಎರಡು ತಿಂಗಳ ಹಿಂದೆ ಚಾಲನೆ ನೀಡಿದ್ದು ಈ ನಿಟ್ಟಿನಲ್ಲಿ ಜನರ ಸಂಪರ್ಕಕ್ಕಾಗಿ ತಾತ್ಕಾಲಿಕ ಸೇತುವೆಯೊಂದನ್ನು ನಿರ್ಮಿಸಲಾಗಿತ್ತು. ಆದರೆ ಹೊಳೆಯಲ್ಲಿ ನೀರು ತುಂಬಿಕೊಂಡು ತಾತ್ಕಾಲಿಕ ಸೇತುವೆ ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ಆ ಭಾಗದ ಜನರು ತೊಂದರೆಯನ್ನು ಅನುಭವಿಸುತ್ತಿದ್ದಾರೆ. 

ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಸುನಿಲ್ ನಾಯ್ಕ ಹಾಗೂ ತಾಲೂಕಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಹಳೆಯ ಸೇತುವೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಿ ಅಳ್ವೆಕೋಡಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ದೋಣಿಗಳ ಮೂಲಕ ಜನರನ್ನು ಸಾಗಿಸುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ. 

ಈ ಕುರಿತಂತೆ ಸ್ಥಳೀಯರು ಮಾಧ್ಯಮಗಳೊಂದಿಗೆ ಮಾತನಾಡಿ ಪಳ್ಳಿ ಹೊಳೆ ಸೇತುವೆ ಸಂಪರ್ಕ ಕಡಿತಗೊಂಡಿದ್ದರಿಂದಾಗಿ ಭಟ್ಕಳ, ಶಿರಾಲಿ, ಹೊನ್ನಾವರ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಮಕ್ಕಳು ಶಾಲೆಗೆ ಹೋಗದ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ. 

ಭಟ್ಕಳದಲ್ಲಿ ದಾಖಲೆಯ ಮಳೆ: ಜೂನ್ ೭ ರಿಂದ ೮ಜೂನ್ ವರೆಗೆ ಭಟ್ಕಳದಲ್ಲಿ ೭೫.೪ಮಿಮಿ ಮಳೆ ದಾಖಲಾಗಿದೆ. ತಾಲೂಕಿನಲ್ಲಿ ಇದುವರೆಗೆ  ೪೪೯.೯ಮಿಮಿ ಮಳೆ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ೧೨೭.೩ ಮಿಮಿ ಮಳೆ ಹೆಚ್ಚು ಬಿದ್ದಿದೆ ಎಂದು ತಿಳಿದುಬಂದಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...