ಉಡುಪಿ: ಜಿಲ್ಲೆಯಲ್ಲಿ ನಗರಾಭಿವೃದ್ದಿ ಇಲಾಖೆಯ ಮೂಲಕ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಮುಕ್ತಾಯಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಿ, ಕಾಮಗಾರಿಗಳ ವಿಳಂಬಕ್ಕೆ ಆಸ್ಪದ ನೀಡಬೇಡಿ ರಾಜ್ಯದ ನಗರಾಭಿವೃದ್ದಿ ಸಚಿವ ಬಿ.ಎ.ಬಸವರಾಜ್ ಸೂಚಿಸಿದ್ದಾರೆ.
ಅವರು ಸೋಮವಾರ, ಉಡುಪಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಂದಾಪುರ ಪಟ್ಟಣದ ಒಳಚರಂಡಿ ಯೋಜನೆ 2017 ಕ್ಕೆ ಮುಕ್ತಾಯಗೊಳ್ಳಬೇಕಾಗಿದ್ದು, ಇದುವರೆಗೆ ಮುಕ್ತಾಯಗೊಳ್ಳದ ಕುರಿತು ಅಸಮಧಾನ ವ್ಯಕ್ತಪಡಿಸಿದ ಸಚಿವರು, ಕಾರ್ಕಳ ಪಟ್ಟಣದ ಒಳಚರಂಡಿ ಯೋಜನೆ ಗಳನ್ನು ಶೀಘ್ರದಲ್ಲಿ ಮುಗಿಸುವಂತೆ ತಿಳಿಸಿದ ಸಚಿವರು, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ ಯೋಜನೆಗೆ ವಿಸ್ತೃತ ಹೊಸ ಯೋಜನಾ ವರದಿ ಸಿದ್ದಪಡಿಸಿ ನೀಡುವಂತೆ ಸೂಚಿಸಿದರು.
ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರದವತಿಯಿಂದ ವ್ಯವಸ್ಥಿತ ಲೇ ಔಟ್ ನಿರ್ಮಾಣ ಮಾಡುವಂತೆ ಸೂಚಿಸಿದ ಸಚಿವರು, ಹೊಸ ಯೋಜನೆಯಂತೆ ಖಾಸಗಿಯವರಿಂದ ಜಮೀನು ಪಡೆದು 50-50 ಅನುಪಾತದಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಂಡ ಲೇ ಔಟ್ ಅಭಿವೃಧ್ದಿ ಪಡಿಸುವಂತೆ ಸೂಚಿಸಿದರು. ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರದಿಂದ 11 ಕೋಟಿ ರೂ ಕೆರೆ ಅಭಿವೃದ್ದಿ ಶುಲ್ಕ ಸಂಘ್ರಹಿಸಿದ್ದು, ಈಗಾಗಲೇ 5 ಕೋಟಿ ವೆಚ್ಚದಲ್ಲಿ 19 ಕೆರೆಗಳ ಅಭಿವೃಧ್ದಿಗೆ ಕ್ರಮಕೈಗೊಂಡಿದ್ದು, 5 ಕೋಟಿ ರೂ ಗಳ ಕಾಮಗಾರಿಗೆ ಯೋಜನಾ ವರದಿ ಸಿದ್ದಪಡಿಸಿ ಸಲ್ಲಿಸಲಾಗಿದೆ ಎಂದು ಪ್ರಾಧಿಕಾರದ ಪ್ರಭಾರ ಆಯುಕ್ತ ರಾಜು ತಿಳಿಸಿದರು.
ಕ್ರಿಯಾ ಯೋಜನೆ ರೂಪಿಸುವಾದ ಸ್ಥಳೀಯ ಶಾಸಕರ ಸಲಹೆಗಳಿಗೆ ಆದ್ಯತೆ ನೀಡುವಂತೆ ತಿಳಿಸಿದ ಸಚಿವರು, ಕೆರೆ ಅಭಿವೃದ್ದಿಗೆ ಅನುಮತಿ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೇ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದರು.
ನಗರಾಭಿವೃದ್ದಿ ಇಲಾಖೆಯ ಕಾಮಗಾರಿಗಳಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡುವಂತೆ ಸೂಚಿಸಿದ ಸಚಿವರು, ಕೊಲ್ಲೂರಿನಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿರುವ ಒಳಚರಂಡಿ ಮತ್ತು ಕುಡಿಯುವ ನೀರು ಕಾಮಗಾರಿಗಳ ಉದ್ಘಾಟನೆಗೆ ದಿನಾಂಕ ನಿಗಧಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಶಾಸಕ ರಘುಪತಿ ಭಟ್, ಲಾಲಾಜಿ ಮೆಂಡನ್, ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗಹ್ಲೋತ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.
Read These Next
ಕಾರವಾರ: ಜಿಲ್ಲೆಯಲ್ಲಿ ಬುಧವಾರ 7 ನಾಮಪತ್ರ ಸಲ್ಲಿಕೆ
12 ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಬುಧವಾರ ಜಿಲ್ಲೆಯಲ್ಲಿ ...
ಭಟ್ಕಳದಲ್ಲಿ ಭಾವೈಕ್ಯತೆ ಮತ್ತು ಧರ್ಮ ಸಮನ್ವಯತೆ ಸಾರುವ ಚೆನ್ನಪಟ್ಟಣ ಶ್ರೀಹನುಮಂತ ದೇವರ ರಥೋತ್ಸವ ಸಂಪನ್ನ
ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ...
ದುಬೈಯಲ್ಲಿ ಮಹಾಮಳೆ; 18ಕ್ಕೂ ಹೆಚ್ಚು ಮಂದಿ ಸಾವು; ಜಲಾವೃತ್ತಗೊಂಡ ವಿಮಾಣ ನಿಲ್ದಾಣ
ದುಬೈ: ಸಾಮಾನ್ಯವಾಗಿ ವರ್ಷದ ಈ ಸಮಯದಲ್ಲಿ ಬಿಸಿಲ ಬೇಗೆಯಿರುತ್ತಿದ್ದ ಸಂಯುಕ್ತ ಅರಬ್ ಸಂಸ್ಥಾನವು ಮಂಗಳವಾರ ಸುರಿದ ಭಾರೀ ಮಳೆಗೆ ...
ಉರಿ ಬಿಸಿಲಲ್ಲೂ ಭರ್ಜರಿ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಿದ ಡಾ.ಅಂಜಲಿ ನಿಂಬಾಳ್ಕರ್
ಕಾರವಾರ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರು ಕಾಂಗ್ರೆಸ್ ಪಕ್ಷದ ಹಿರಿಯರು, ...
ಗ್ಯಾರಂಟಿ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಹಿಂದೆ ಬಿದ್ದಿದ್ದಾರೆ: ಆರ್ ವಿ ದೇಶಪಾಂಡೆ
ಕಾರವಾರ: ಗ್ಯಾರಂಟಿ ಬಗ್ಗೆ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಪದ ಬಳಸುತ್ತಿದ್ದಾರೆ. ಮೋದಿ ಗ್ಯಾರಂಟಿ ಎಂದು ...
ಕಾರವಾರ: ಜಿಲ್ಲೆಯಲ್ಲಿ ಮಂಗಳವಾರ 4 ನಾಮಪತ್ರ ಸಲ್ಲಿಕೆ
12-ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ, ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಮಂಗಳವಾರ ...
ಕಾರವಾರ: ಜಿಲ್ಲೆಯಲ್ಲಿ ಮಂಗಳವಾರ 4 ನಾಮಪತ್ರ ಸಲ್ಲಿಕೆ
12-ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬAಧಿಸಿದAತೆ, ನಾಮಪತ್ರಗಳ ಸಲ್ಲಿಕೆಗೆ ಮೂರನೇ ದಿನವಾದ ಮಂಗಳವಾರ ...
ನೀರಿನ ಪೈಪ್ ಲೈನ್ ಹಾಳಾಗಿ ಚರಂಡಿ ಸೇರಿದ ಸಾವಿರಾರು ಲೀಟರ್ ಕುಡಿಯುವ ನೀರು
ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಂಗಿನಕಟ್ಟೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕುಡಿಯುವ ನೀರಿನ ಪೈಪ್ನಲ್ಲಿ ...
ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಮೂರು ನಾಮಪತ್ರ ಸಲ್ಲಿಕೆ
ಕಾರವಾರ : 12-ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ಜಿಲ್ಲೆಯಲ್ಲಿ ಇಂದು ಒಟ್ಟು ಮೂರು ...
ಕಾರವಾರ ಯುವತಿ ಕಾಣೆ. ಪತ್ತೆಗಾಗಿ ಮನವಿ.
ಸುನೀತಾ ಕಿರಣ ಲಮಾಣಿ(20ವರ್ಷ), ಸಾ: ಲಕ್ಷಮೇಶ್ವರ, ಅಕ್ಕಿಗುಂದಿ, ಗದಗ. ಹಾಲಿ ಸೀಬರ್ಡ್ ಕಾಲೋನಿ, ಚಿತ್ತಾಕುಲ ಕಾರವಾರ ಇವರು ದಿನಾಂಕ:10-04-2024 ...
ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...
ಮಲಗಿದ್ದವರ ಮೇಲೆ ಹರಿದ ಕಾರು : ಮಗು ಸೇರಿ ಇಬ್ಬರು ಗಂಭೀರ
ಮಲಗಿದ್ದವರ ಮೇಲೆ ಹರಿದ ಕಾರು : ಮಗು ಸೇರಿ ಇಬ್ಬರು ಗಂಭೀರ