ಪವಿತ್ರ ಹಜ್ ಯಾತ್ರೆಯ ಮೊದಲ ದಿನ ಮಿನಾಗೆ ಆಗಮಿಸಿದ 1,000 ಯಾತ್ರಾರ್ಥಿಗಳು

Source: VB News | Published on 29th July 2020, 11:44 PM | Gulf News | Don't Miss |

 

ಜೆದ್ದಾ:ಹಜ್ ಯಾತ್ರೆ ಕೈಗೊಂಡಿರುವ ಸುಮಾರು  1,000 ಯಾತ್ರಾರ್ಥಿಗಳು ಬುಧವಾರ ಮಕ್ಕಾದ  ಹೊರಗಿನ ಮಿನಾದಲ್ಲಿ ಜಮಾಯಿಸಲಿದ್ದು, ತಮ್ಮ ಯಾತ್ರೆಯನ್ನು ಆರಂಭಿಸಲಿದ್ದಾರೆ.
ಈ ಬಾರಿ ಕೋವಿಡ್ ಸಮಸ್ಯೆಯಿಂದಾಗಿ  ಸಾಮಾನ್ಯವಾಗಿ ನಡೆಯುವ ಪ್ರಮುಖ  ರೀತಿರಿವಾಜುಗಳು ಇರುವುದಿಲ್ಲವಾದುದರಿಂದ ಯಾತ್ರಾರ್ಥಿಗಳು  ಗುರುವಾರ ಸೂರ್ಯಾಸ್ತದ ತನಕ ಪ್ರಾರ್ಥನೆ ಸಲ್ಲಿಸುತ್ತಾ ಸಮಯ ಕಳೆಯಲಿದ್ದಾರೆ.
ಮಕ್ಕಾದ  ಮಸೀದಿಯಿಂದ ಈಶಾನ್ಯ ದಿಕ್ಕಿನಲ್ಲಿ ಸುಮಾರು 7 ಕಿ.ಮೀ. ದೂರದಲ್ಲಿರುವ  ಮಿನಾದಲ್ಲಿ ಸಾಮಾನ್ಯವಾಗಿ ಇತರ ವರ್ಷಗಳಲ್ಲಿ  ವಿಶ್ವದ ಅತ್ಯಂತ ದೊಡ್ಡ ಟೆಂಟ್ ನಗರ ತಲೆಯೆತ್ತುತ್ತಿತ್ತಲ್ಲದೆ, ಇಲ್ಲಿ ಸುಮಾರು 25 ಲಕ್ಷ ಯಾತ್ರಾರ್ಥಿಗಳಿಗೆ  ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ.
ಆದರೆ ಈ ಬಾರಿ ಕೋವಿಡ್ 19 ಸಮಸ್ಯೆಯಿಂದಾಗಿ ಹಜ್ ಯಾತ್ರಾರ್ಥಿಗಳ ಸಂಖ್ಯೆಯನ್ನು ಸೀಮಿತಗೊಳಿಸಲಾಗಿದ್ದು  ಸೌದಿಯ ನಾಗರಿಕರಿಗೆ ಹಾಗೂ ಅಲ್ಲಿಯೇ ನೆಲೆಸಿರುವ ವಲಸಿಗರಿಗೆ ಮಾತ್ರ ಸೀಮಿತ ಸಂಖ್ಯೆಯಲ್ಲಿ ಅವಕಾಶ ನೀಡಲಾಗಿದೆ. ಹಜ್ ಯಾತ್ರೆಗೆ ಆಯ್ಕೆಗೊಂಡವರ ದೇಹದ ತಾಪಮಾನ ಪರೀಕ್ಷೆ ನಡೆಸಲಾಗಿದೆಯಲ್ಲದೆ ಅವರನ್ನು ಮಕ್ಕಾಗೆ ಆಗಮಿಸಿದಂತೆಯೇ  ಕ್ವಾರಂಟೈನಿನಲ್ಲಿರಿಸಲಾಗಿದೆ ಹಾಗೂ ಅವರ ಸಾಮಾಗ್ರಿಗಳನ್ನು ಕೂಡ ಸ್ಯಾನಿಟೈಸ್ ಮಾಡಲಾಗಿದೆ.
ಕಾಬಾದ ಪ್ರದೇಶದ ಸುತ್ತಮುತ್ತ ಕೂಡ ಸ್ಯಾನಿಟೈಸ್ ಮಾಡಲಾಗಿದ್ದು, ಇಡೀ ಕಾಬಾದ ಪ್ರದೇಶದಲ್ಲಿ ಭಾರೀ ಭದ್ರತೆ ಕಲ್ಪಿಸಲಾಗಿದೆ. ಯಾತ್ರಾರ್ಥಿಗಳಿಗೆ ಯಾವುದೇ ಸ್ಥಳ ಮುಟ್ಟದಂತೆ ಸೂಚನೆ ನೀಡಲಾಗಿದೆ. ಯಾತ್ರಾರ್ಥಿಗಳಿಗೆ  ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದ್ದು, ಸಂಚಾರಿ ಕ್ಲಿನಿಕ್ ಗಳು ಹಾಗೂ ಆ್ಯಂಬುಲೆನ್ಸು ಗಳನ್ನು ಕೂಡ ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ

Read These Next

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...