ಅನ್ನ ಭಾಗ್ಯ ಯೋಜನೆ; ಅಕ್ಕಿ ಮಾರಾಟ ಮಾಡುವ ಪಡಿತರ ಚೀಟಿದಾರರ ವಿರುದ್ಧ ಕ್ರಿಮಿನಲ್ ಮೊಕದ್ಧಮೆ-ತಹಸಿಲ್ದಾರ್

Source: sonews | By Staff Correspondent | Published on 21st January 2020, 11:22 PM | State News |

ಶ್ರೀನಿವಾಸಪುರ: ಅನ್ನ ಭಾಗ್ಯ ಯೋಜನೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಉಚಿತವಾಗಿ ವಿತರಿಸಲಾಗುವ ಅಕ್ಕಿಯನ್ನು ಹಣಕ್ಕಾಗಿ ಮಾರಾಟ ಮಾಡುವ ಪಡಿತರ ಚೀಟಿದಾರರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು ಎಂದು ತಹಶೀಲ್ದಾರ್‌ ಕೆ.ಎನ್‌.ಸುಜಾತ ತಿಳಿಸಿದ್ದಾರೆ.

ಪಡಿತರ ಪಡೆದ ಕೆಲವು ಫಲಾನುಭವಿಗಳು ಹಣಕ್ಕಾಗಿ ಕಳ್ಳಸಾಗಾಣಿಕೆದಾರರು ಹಾಗೂ ಅಕ್ರಮ ದಾಸ್ತಾನು ಮಾಡುವವರಿಗೆ ಮಾರಾಟ ಮಾಡುತ್ತಿರು ವಿಷಯ ಇಲಾಖೆ ಅಧಿಕಾರಿಗಳ ಗಮನಕ್ಕೆ ಬಂದಿದೆ. ಪಡಿತರ ವಸ್ತುಗಳನ್ನು ಹಣಕ್ಕಾಗಿ ಮಾರಾಟ ಮಾಡುವಾಗ ಸಿಕ್ಕಿಬಿದ್ದಲ್ಲಿ ಅಂಥವರ ಪಡಿತರ ಚೀಟಿ ರದ್ದುಪಡಿಸಲಾಗುವುದು ಹಾಗೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಡಿತರ ವಸ್ತುಗಳನ್ನು ಮಾರಾಟ ಮಾಡುವುದು ಕಂಡುಬಂದಲ್ಲಿ, ಸಾರ್ವಜನಿಕರು  ಪೊಲೀಸ್‌ ಠಾಣೆ ಅಥವಾ ಆಹಾರ ಇಲಾಖೆ ಅಧಿಕಾರಿಗಳಿ ಮಾಹಿತಿ ನೀಡಬೇಕು. ತಹಶೀಲ್ದಾರ್‌ ಕೆ.ಎನ್‌.ಸುಜಾತ (ಮೊಬೈಲ್ ಸಂಖ್ಯೆ 9481569955), ಆಹಾರ ಶಿರಸ್ತೇದಾರ್‌ ಮಂಜುನಾಥ್‌ (9844029644), ಆಹಾರ ನಿರೀಕ್ಷಕರಾದ ಹಬೀಬ್‌ ಊರ್‌ ರೆಹಮಾನ್‌ (9449721985), ಜುನೈದ್‌ ಅಲಂ ಖಾನ್‌ (8328405915) ಅವರ ಮೊಬೈಲ್‌ ಸಂಖ್ಯೆಗಳಿಗೆ ಫೋನ್‌ ಮಾಡಿ ತಿಳಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
 

ವರದಿ ಶಬ್ಬೀರ್ ಅಹಮದ್ ಶ್ರೀನಿವಾಸ ಪುರ

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...