ಮಂಡ್ಯ- ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಅಭ್ಯರ್ಥಿಗಳಿಗೆ ಹಾಗೂ ಏಜೆಂಟರುಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಏಜೆಂಟರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ, ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆಯಾಗದಂತೆ ಹಾಗೂ ಇನ್ನಿತರ ನಿಯಮಾವಳಿಗಳ ಉಲ್ಲಂಘನೆಯಾಗದಂತೆ ಕ್ರಮವಹಿಸಿ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೈಲಜಾ ಮತದಾನದ ವಿಧಾನ, ಮತದಾನದ ಸಂದರ್ಭದಲ್ಲಿ ಜಾಗರೂಕತೆಯಿಂದ ವಹಿಸಬೇಕಾದ ವಿಧಾನ, ಮತದಾನದ ಕ್ರಮದ ಬಗ್ಗೆ ವಿವರಿಸಿದರು.
ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಬಿ.ಸಿ ಮಂಜು, ಬಿಜೆಪಿ ಪಕ್ಷದ ಚುನಾವಣಾ ಏಜೆಂಟ್ ಲಲಾಟಾಕ್ಷ , ಕಾಂಗ್ರೆಸ್ ಪಕ್ಷದ ಚುನಾವಣಾ ಏಜೆಂಟ್ ಮಂಜುನಾಥ್,ಜನತಾದಳದ ಚುನಾವಣಾ ಏಜೆಂಟ್ ಬಸವರಾಜು, ಪಕ್ಷೇತರ ಅಭ್ಯರ್ಥಿ ಮಂಜುನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.