ಉಡುಪಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಪ್ರತಿ ಮನೆ ಮನೆಗಳಿಂದ ಆರಂಭವಾಗಬೇಕು ಎಂದು ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಹೇಳಿದ್ದಾರೆ.
ಅವರು ಬುಧವಾರ, ಎಂಜಿಎಂ ಕಾಲೇಜಿನನ ನೂತನ ರವೀಂದ್ರ ಮಂಟಪದಲ್ಲಿ, ಜಿಲ್ಲಾಡಳಿತ ಉಡುಪಿ ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ, ಎಂ.ಜಿ.ಎಂ. ಕಾಲೇಜು ಉಡುಪಿ, ಮಹಾತ್ಮ ಗಾಂಧೀ ಸ್ಮಾರಕ ನಿಧಿ ಎಂ.ಜಿ.ಎಂ, ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಮಾದಕ ವಸ್ತು ವಿರೋಧಿ ಸಪ್ತಾಹದ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮನೆಗಳಲ್ಲಿ ಪೋಷಕರು ಧೂಮಪಾನ, ಮದ್ಯಪಾನ ಮಾಡುತ್ತಿದ್ದರೆ ಅದರ ಪರಿಣಾಮ ಮಕ್ಕಳ ಮೇಲೆ ಆಗುತ್ತದೆ ಆದ್ದರಿಂದ ಪೋಷಕರು ಮಾದಕ ವಸ್ತುಗಳ ಸೇವನೆಯಿಂದ ದೂರವಿದ್ದು, ಮಕ್ಕಳಿಗೆ ಇವುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಬೇಕು, ಭಾರತದಲ್ಲಿ 3/1 ಭಾಗ ಅಪಘಾತಗಳು ಮದ್ಯಪಾನ ಸೇವನೆ ಮಾಡಿ ವಾಹನ ಚಲಾಯಿಸುವುದರಿಂದ ಮತ್ತು 4/1 ಭಾಗ ಆತ್ಮಹತ್ಯೆ ಪ್ರಕರಣಗಳು ಮಾದಕ ವಸ್ತುಗಳ ವ್ಯಸನದ ಕಾರಣದಿಂದ ನಡೆಯುತ್ತಿವೆ ಅಲ್ಲದೇ ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಿಗೂ ಸಹ ಮಾದಕ ವಸ್ತುಗಳ ಸೇವನೆಯೇ ಪ್ರಮುಖ ಕಾರಣ, ಮಾದಕ ವಸ್ತುಗಳಿಂದ ದೂರವಿದ್ದು, ಸ್ವಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ಯುವ ಜನತೆಯ ಪಾತ್ರ ಅತ್ಯಂತ ಮಹತ್ವವಾಗಿದೆ ಎಂದು ನಳಿನಿ ಪ್ರದೀಪ್ ಹೇಳಿದರು.
ಮುಖ್ಯ ಅತಿಥಿಯಾಗಿದ್ದ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಮಾತನಾಡಿ, ಯುವ ಜನತೆ ಮಾದಕ ವಸ್ತುಗಳ ಕ್ಷಣಿಕ ಸುಖಕ್ಕೆ ಬಲಿಯಾಗದೇ, ಜೀವನದಲ್ಲಿ ಸ್ಪಷ್ಟ ಗುರಿ ಉದ್ದೇಶ ಹೊಂದಿರಬೇಕು, ಮಾದಕ ವ್ಯಸನಿಗಳನ್ನು ಗುರುತಿಸಿ ಅವರನ್ನು ವ್ಯಸನ ಮುಕ್ತರನ್ನಾಗಿ ಮಾಡಬೇಕು, ಮಾದಕ ವಸ್ತುಗಳ ವಿರುದ್ದ ಸ್ವಯಂ ನಿಯಂತ್ರಣ ಮಾಡಿಕೊಂಡಲ್ಲಿ, ಇದಕ್ಕೆ ಬಲಿಯಾಗಲು ಸಾಧ್ಯವಿಲ್ಲ, ವಿದ್ಯಾರ್ಥಿಗಳು ಸಮಾಜ ಮುಖಿ ಕಾರ್ಯದಲ್ಲಿ ತೊಡಗಿಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದರು.
ಎಂಜಿಎಂ ಕಾಲೇಜಿನ ಗಾಂಧೀ ಅಧ್ಯಯನ ಸಂಸ್ಥೆಯ ಸಂಶೋಧಕ ವಿನೀತ್ ರಾವ್ ಮಾತನಾಡಿ, ಮಹಾತ್ಮ ಗಾಂಧೀಜಿಯವರು 1920 ರಲ್ಲಿ ರೂಪಿಸಿದ ತಮ್ಮ ರಚನಾತ್ಮಕ ಸಾಮಾಜಿಕ ಚಳುವಳಿಯಲ್ಲಿ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಬಗ್ಗೆ ತಿಳಿಸಿದ್ದು, ಆದರೆ ಇಂದಿಗೂ ಸಹ ಈ ಸಮಸ್ಯೆ ಬಗೆಹರಿದಿಲ್ಲ, ಆತ್ಮಬಲದೊಂದಿಗೆ ಆತ್ಮಶುದ್ದಿ ಹೊಂದಿದ್ದರೆ ಮಾದಕ ವಸ್ತುಗಳ ಪ್ರಭಾವಕ್ಕೆ ಒಳಗಾಗಲು ಸಾಧ್ಯವಿಲ್ಲ, ವೈದ್ಯಕೀಯ ಉಪಯೋಗಕ್ಕೆ ಮಾತ್ರವಲ್ಲದೇ ಇತರೇ ಉದ್ದೇಶಕ್ಕೆ ಮಾದಕ ವಸ್ತುಗಳ ಬಳಕೆ ಸಲ್ಲದು ಎಂಬ ಸಂವಿಧಾನದ ಆಶಯ ಪಾಲಿಸಬೇಕು ಎಂದು ಹೇಳಿದರು.
ಮಣಿಪಾಲ ಕೆಎಂಸಿಯ ಮನೋವಿಜ್ಞಾನ ವಿಭಾಗದ, ಮನೋ ವೈದ್ಯರು ಹಾಗೂ ಸಹಾಯಕ ಪ್ರಾಧ್ಯಾಪಕ ಡಾ. ರವೀಂದ್ರ ಮನೋಳಿ, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಎಂ.ಜಿ.ವಿಜಯ್ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇದರ ಕಾರ್ಯದರ್ಶಿ ರೋಹಿಣಿ ಕೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಹಿರಿಯ ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮಾ ನಿರೂಪಿಸಿದರು, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಷಾ ವಂದಿಸಿದರು.
Read These Next
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...
ಮನೆಯಿಂದ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ
ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...
ಚಿಂಚೋಳಿಯಲ್ಲಿ ಬೈಕ್ ಜಾಥಾದ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಚಿಂಚೋಳಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತ ವತಿಯಿಂದ ಹಮ್ಮಿಕೊಳ್ಳಲಾದ "ಮತದಾನ ಜಾಗೃತಿ ಜಾಥಾ ...
ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್
ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...
ಏ.29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ಸಕಲ ಸಿದ್ದತೆಗೆ ಸೂಚನೆ
ಶಿವಮೊಗ್ಗ : ಜಿಲ್ಲೆಯಲ್ಲಿ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ...
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಸಿ ಸುಳ್ಳು : ಸಿ lಎಂ ಸಿದ್ದರಾಮಯ್ಯ ಆರೋಪ
ಬೆಂಗಳೂರು : ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ...