ಕಾರವಾರ: “ಇಂದು ವಿತರಿಸಲಾಗುತ್ತಿರುವ ಟ್ಯಾಬ್ನೊಂದಿಗೆ ಭವಿಷ್ಯ ಕೂಡ ನಿಮ್ಮ ಕೈಯಲ್ಲೇ ಇದೆ, ವಿದ್ಯಾರ್ಥಿಗಳು ಸರಕಾರ ನೀಡಿರುವ ಟ್ಯಾಬ್ ಪಿಸಿ ಗಳ ಸದುಪಯೋಗಪಡಿಸಿಕೊಳ್ಳಬೇಕೆಂದು” ಅಂಕೋಲಾ-ಕಾರವಾರ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ್ ಹೇಳಿದರು.
ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜ್ ನಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ, ಸ್ಮಾರ್ಟ ಕ್ಲಾಸ್ ರೂಮ್ ಉದ್ಘಾಟನೆ ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ಪಿಸಿ ವಿತರಣಾ ಕಾರ್ಯಕ್ರದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಇಂದಿನ ಮಕ್ಕಳೆ ನಾಳೆಯ ಪ್ರಜೆಗಳು ಎನ್ನುವಂತೆ ಇಂದಿನ ವಿದ್ಯಾರ್ಥಿಗಳೇ ನಾಳೆಯ ದೇಶದ ಶಕ್ತಿ ಆಸ್ತಿ. ಇತಿಹಾಸದಲ್ಲೇ ಮೊದಲ ಬಾರಿಗೆ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಸರಕಾರ ಪಿ ಸಿ ವಿತರಿಸುತ್ತಿದೆ. ಎಲ್ಲೂ ತಾರತಮ್ಯವಾಗಿಲ್ಲ, ಪ್ರತಿಯೊಬ್ಬ ವಿದ್ಯಾರ್ಥಿಗೆ ಟ್ಯಾಬ್ ದೊರೆಯುವದರಿಂದ ಸಾಕಷ್ಟು ಅನಕೂಲ ಆಗಲಿದೆ. ಲಾಕ್ ಡೌನ್ ಸಂದರ್ಭದಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಅದರಲ್ಲೂ ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಮಸ್ಯೆ ಎದುರಾಗಿದೆ. ಈಗ ಪಿ ಸಿ ಟ್ಯಾಬ್ ಸಿಗುತ್ತಿರುವದರಿಂದ ಜಗತ್ತಿನ ಜ್ಞಾನ ಬಂಡಾರಿಗಳಾಗಿ, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು, ವಿದ್ಯಾರ್ಥಿ ಜೀವನ ಒಮ್ಮೆ ಕಳೆದು ಹೊದರೆ ಮತ್ತೆ ಮರಳುವುದಿಲ್ಲ. ವಿದ್ಯೆಯೇ ಆಸ್ತಿ, ಅದನ್ನು ಯಾರೂ ಕಸಿದುಕೊಳ್ಳಲು ಆಗುವುದಿಲ್ಲ, ತಂತ್ರಜ್ಞಾನವನ್ನೆಲ್ಲ ಕಲೆತು ತಮ್ಮ ಬುದ್ಧಿ ಸಾಮಥ್ರ್ಯ ಏನೆಂಬುದನ್ನು ತೋರಿಸಿ. ಹಾಗೆಯೇ ಮಾನವೀಯತೆಯನ್ನೂ ಕೂಡ ಅಳವಡಿಸಿಕೊಂಡು ಅಗತ್ಯವಿದ್ದವರಿಗೆ ಸಹಾಯ ನೀಡುವಂತವರಾಗಬೇಕೆಂದು ಹೇಳಿದರು.
ಮುಖ್ಯ ಅಥಿತಿಯಾಗಿ ಭಾಗವಹಿಸಿದ್ದ ಕಾರವಾರ ನಗರಸಭೆ ಅಧ್ಯಕ್ಷ ಡಾ. ನಿತೀನ್ ಪಿಕಳೆ ಮಾತನಾಡಿ ಬಿ ಎ, ಬಿಕಾಂ, ಬಿಎಸ್ಸಿ ಹಾಗೂ ಬಿಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ಮತ್ತು ಪಿ ಸಿ ಗಳನ್ನು ಸರಕಾರ ವಿತರಿಸುತ್ತಿರುವುದು ಮಹತ್ವದ ಕಾರ್ಯವಾಗಿದೆ. ಎಲ್ಲ ವರ್ಗದ ವಿದ್ಯಾರ್ಥಿಗಳು ಟ್ಯಾಬ್ ಮತ್ತು ಪಿ ಸಿ ಪಡೆಯಲು ಸಾಧ್ಯವಾಗುವದಿಲ್ಲ, ಸರಕಾರ ನೀಡಿರುವ ಸೌಲಭ್ಯವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಕಾಲೇಜಿನ ಕೀರ್ತಿಯನ್ನು ಎಲ್ಲಡೆ ಬೆಳಗಿಸಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಪ್ರಾಂಶುಪಾಲ್ ಡಾ. ವೆಂಕಟೇಶ ಗಿರಿ ಮಾತನಾಡಿ ಕ್ಲಾಸ್ ರೂಮ್ ಗಳನ್ನು ಪ್ರೊಜೆಕ್ಟರ್, ವೈಟ್ ಬೋರ್ಡ್, ಯು ಪಿ ಎಸ್ ಮತ್ತು ಇಂಟರ್ನೆಟ್ ಸೌಲಭ್ಯಗಳನ್ನು ಹೊಂದಿಸುವ ಮೂಲಕ ಸ್ಮಾರ್ಟ್ ಕ್ಲಾಸಗಳನ್ನಾಗಿ ಮಾಡಲಾಗುತ್ತಿದೆ. ಉಪನ್ಯಾಸಕರು ಪಿ ಪಿ ಟಿ ವಿಡಿಯೋ ಆಡಿಯೋ ಮತ್ತು ಇಮೇಜ್ಗಳನ್ನು ಬಳಸಿ ವಿದ್ಯಾರ್ಥಿಗಳಿಗೆ ಸುಲಭವಾಗಿ ಅರ್ಥವಾಗುವಂತೆ ಪಾಠ ಮಾಡಬಹುದು. ವಿದ್ಯಾರ್ಥಿಗಳು ಎಲ್ಲೇ ಇದ್ದರೂ ಅವುಗಳನ್ನು ಕಲಿಯಬಹುದಾಗಿರುತ್ತದೆ ಎಂದರು.
ಸರಕಾರಿ ಕಲಾ ಹಾಗೂ ವಿಜ್ಞಾನ ಕಾಲೇಜಿನ 8 ಮತ್ತು ಮಹಿಳಾ ಕಾಲೇಜಿನ 3 ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಇಂದು ಟ್ಯಾಬ್ ಪಿ ಸಿ ಗಳನ್ನು ವಿತರಿಸಲಾಯಿತು. ಡಾ. ವಿಜಯಾ ನಾಯ್ಕ ಸ್ವಾಗತಿಸಿದರು. ವಿದ್ಯಾರ್ಥಿನಿ ಐಶ್ವರ್ಯ ಭಟ್ ಪ್ರಾರ್ಥನೆ ಹಾಗೂ ನಾಡಗೀತೆ ನಡೆಸಿಕೊಟ್ಟರು. ಪ್ರೋ. ರಾಜೇಶ್ವರಿ ಭಟ್ ವಂದನಾರ್ಪಣೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಐ ಟಿ ಸಂಯೋಜಕ ಡಾ. ಸುದೀರ ಮನವಾಡಿ, ಐ ಕ್ಯೂ ಎ ಸಿ ಸಂಯೋಜಕ ಡಾ. ವಸಂತಕುಮಾರ ಬಿ, ಸರಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ್, ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿಧ್ಯಾರ್ಥಿ ವೃಂದ ಉಪಸ್ಥಿತರಿದ್ದರು.