ಗೋರಕ್ಷಣೆಯಲ್ಲಿ ನಡೆಯುವ ಗುಂಪು ಹತ್ಯೆಗಳು ಸಂಪೂರ್ಣ ಖಂಡನಾರ್ಹ-ಪ್ರಧಾನಿ ಮೋದಿ

Source: sonews | By Staff Correspondent | Published on 1st January 2019, 10:59 PM | National News | Don't Miss |

ಹೊಸದಿಲ್ಲಿ: ಗೋರಕ್ಷಣೆಯಲ್ಲಿ ನಡೆಯುವ ಗುಂಪು ಹತ್ಯೆಗಳು ಸಂಪೂರ್ಣ ಖಂಡನಾರ್ಹ. ಇಂತಹ ಘಟನೆಗಳು ನಾಗರಿಕ ಸಮಾಜವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಎಎನ್ ಐ ಸುದ್ದಿಸಂಸ್ಥೆಯೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ಅವರು, “ಗೋರಕ್ಷಣೆ ಹೆಸರಿನಲ್ಲಿ ನಡೆಯುವ ಗುಂಪು ಹತ್ಯೆಗಳು ಸಂಪೂರ್ಣ ಖಂಡನಾರ್ಹ. ಇಂತಹ ಕೃತ್ಯಗಳನ್ನು ಯಾರೂ ಬೆಂಬಲಿಸಬಾರದು. ಇದು ಸಂಪೂರ್ಣ ತಪ್ಪು” ಎಂದರು.

ಗುಂಪುಹತ್ಯೆಗಳಿಂದ ದೇಶದಲ್ಲಿ ಅಲ್ಪಸಂಖ್ಯಾತರು ಅಸುರಕ್ಷಿತ ಭಾವನೆಯಲ್ಲಿದ್ದಾರೆ ಎಂಬ ನಾಸಿರುದ್ದೀನ್ ಶಾ ಅವರ ಹೇಳಿಕೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಧಾನಿ, “ಅಜೆಂಡಾಗಳ ಕಾರಣದಿಂದ ಕೆಲವರು ಚುನಾವಣೆಯ ಸಮಯ ಅಸುರಕ್ಷಿತ ಭಾವನೆ ಇದೆ ಎನ್ನುತ್ತಾರೆ” ಎಂದರು.

“2014ರಲ್ಲಿ ನಾವು ಅಧಿಕಾರಕ್ಕೆ ಬಂದ ಮೇಲೆಯೇ ಇಂತಹ ಘಟನೆಗಳು ನಡೆಯುತ್ತಿದೆಯೇ?” ಎಂದವರು ಪ್ರಶ್ನಿಸಿದರು.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...