ಸಂಘಪರಿವಾರದ ನಾಯಕರನ್ನು ದೋಷಮುಕ್ತಗೊಳಿಸಿರುವ ವಿಶೇಷ ಸಿಬಿಐ ನ್ಯಾಯಾಲಯದ ತೀರ್ಪು ಆಘಾತಕಾರಿ

Source: sonews | By Staff Correspondent | Published on 30th September 2020, 11:49 PM | National News |

ಹೊಸದಿಲ್ಲಿ : 1992ರ ಡಿಸೆಂಬರ್ 6ರಂದು ನಡೆದ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಎಲ್.ಕೆ.ಆಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾಭಾರತಿ ಸೇರಿ ದಂತೆ ಸಂಘಪರಿವಾರದ ನಾಯಕರನ್ನು ದೋಷಮುಕ್ತಗೊಳಿಸಿರುವ ವಿಶೇಷ ಸಿಬಿಐ ನ್ಯಾಯಾಲಯದ ತೀರ್ಪು ತನಗೆ ಆಘಾತವುಂಟು ಮಾಡಿದೆ ಎಂದು ನರಸಿಂಹರಾವ್ ಸರಕಾರದಲ್ಲಿ ಗೃಹ ಕಾರ್ಯದರ್ಶಿ ಮಾಧವ್ ಗೊಡ್ಬೋಲೆ ಹೇಳಿದ್ದಾರೆ.

 ಬಾಬರಿ ಮಸೀದಿ ಧ್ವಂಸ ಘಟನೆಯು ಪೂರ್ವಯೋಜಿತವಲ್ಲವೆಂಬ ಸಿಬಿಐ ನ್ಯಾಯಾಲಯದ ಅಭಿಪ್ರಾಯಕ್ಕೂ ಅವರು ಅಸಮ್ಮತಿ ವ್ಯಕ್ತಪಡಿಸಿದ್ದಾರೆ. ಪೂರ್ವಯೋಜನೆಯಿಲ್ಲದೆ ಬಾಬರಿ ಮಸೀದಿಯನ್ನು ಕೇವಲ ಐದು ತಾಸುಗಳಲ್ಲಿ ಕರಸೇವಕರು ಧ್ವಂಸಗೊಳಿಸಲು ಸಾಧ್ಯವೇ ಇರುತ್ತಿರಲಿಲ್ಲವೆಂದು ಅವರು ಹೇಳಿರುವುದಾಗಿ ‘ಹಫಿಂಗ್ಟನ್‌ಪೋಸ್ಟ್’ ಸುದ್ದಿಜಾಲ ತಾಣದಲ್ಲಿ ಪ್ರಕಟವಾದ ವರದಿಯೊಂದು ತಿಳಿಸಿದ.

 ‘‘ಪ್ರಾಮಾಣಿಕವಾಗಿ ಹೇಳುವುದಾದರೆ ಈ ತೀರ್ಪು ನನಗೆ ಗಾಬರಿಯುಂಟು ಮಾಡಿದೆ. ಮೊದಲನೆಯದಾಗಿ ಇಷ್ಟೊಂದು ಬೃಹತ್ ಗಾತ್ರದ ಮಸೀದಿಯನ್ನು ಯಾವುದೇ ಪೂರ್ವ ಯೋಜನೆಯಿಲ್ಲದೆ ಅಥವಾ ಪೂರ್ವಸಿದ್ಧತೆಯಿಲ್ಲದೆ ಐದು ತಾಸುಗಳ ಅವಧಿಯಲ್ಲಿ ಕೆಡವಿ ಹಾಕಲಾಯಿತೆಂಬುದನ್ನು ನಂಬಲು ಅಸಾಧ್ಯವಾದುದು’’ ಎಂದವರು ಹೇಳಿದ್ದಾರೆ. ನ್ಯಾಯಾಲಯದ ಈ ತೀರ್ಪು ನಮ್ಮ ನ್ಯಾಯಾಂಗ ವ್ಯವಸ್ಥೆಯ ಹಾಗೂ ಕ್ರಿಮಿನಲ್ ಕಾನೂನು ವ್ಯವಸ್ಥೆಯ ಮೇಲಿನ ವ್ಯಾಖ್ಯಾನವಾಗಿದೆ’’ ಎಂದವರು ಅಭಿಪ್ರಾಯಿಸಿರುವುದಾಗಿ ವರದಿಯು ತಿಳಿಸಿದೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...