ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ತನ್ನ ಕ್ಷೇತ್ರವನ್ನು ವಿಸ್ತರಿಸಿಕೊಳ್ಳುತ್ತಿದ್ದು ಸೋಮವಾರ ಶಿರಸಿ ಮೂಲದ ವ್ಯಕ್ತಿಯೊಬ್ಬರನ್ನು ಬಲಿ ತೆಗೆದುಕೊಳ್ಳುವುದರ ಮೂಲಕ ಕೊರೋನಾ ಸೋಂಕಿನಿಂದ ಸತ್ತವರ ಸಂಖ್ಯೆ ಎರಡಕ್ಕೇರಿದಂತಾಗಿದೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಜು.4 ರಂದು ಬೆಂಗಳೂರಿನಿಂದ ಶಿರಸಿ ಬಂದ 42 ವರ್ಷದ ಪ್ರಾಯದ ವ್ಯಕ್ತಿಗೆ ಭಾನುವಾರ ರಾತ್ರಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿರಸಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಿದ್ದು ಇವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೊಳಪಡಿಸಿದಾಗ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದ್ದು ಇಂದು ಬೆಳಿಗ್ಗೆ ಕಾರವಾರದ ಕೋವಿಡ್ -19 ವಾರ್ಡಿಗೆ ವ್ಯಕ್ತಿಯನ್ನು ಸ್ಥಳಾಂತರಿಸಲಾಗಿತ್ತು ಎನ್ನಲಾಗಿದೆ. ಅಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡುತ್ತಿತ್ತು ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.