ಮುಷ್ಕರಕ್ಕೆ ದೇಶವ್ಯಾಪಿ ವೈದ್ಯರ ಸಾಥ್, ಚಿಕಿತ್ಸೆ ಸಿಗದೇ ರೋಗಿಗಳ ನರಳಾಟ

Source: so news | By MV Bhatkal | Published on 17th June 2019, 5:27 PM | National News | Don't Miss |

ನವದೆಹಲಿ/ಮುಂಬೈ ಕಿರಿಯ ವೈದ್ಯರ ಮೇಲೆ ಹಲ್ಲೆ ಮತ್ತು ಅವರಿಗೆ ಸೂಕ್ತ ರಕ್ಷಣೆ ನೀಡುವಲ್ಲಿ ಮೀನಮೇಷ ಎಣಿಸುತ್ತಿರುವ ಪಶ್ಚಿಮ ಬಂಗಾಳ ಸರ್ಕಾರದ ಧೋರಣೆ ಖಂಡಿಸಿ ನಡೆಯುತ್ತಿರುವ ಮುಷ್ಕರಕ್ಕೆ ದೇಶವ್ಯಾಪಿ ವೈದ್ಯರು ಬೆಂಬಲ ನೀಡಿದ್ದಾರೆ.
ರಾಜಧಾನಿ ದೆಹಲಿಯ ಏಮ್ಸ್ ಸೇರಿದಂತೆ ಮುಂಬೈ, ಚೆನ್ನೈ ಮೊದಲಾದ ಮಹಾನಗರಗಳ ಪ್ರತಿಷ್ಠಿತ ಆಸ್ಪತ್ರೆಗಳ ವೈದ್ಯರು ಇಂದು ಒಂದು ದಿನದ ಮುಷ್ಕರದಲ್ಲಿ ಪಾಲ್ಗೊಂಡು ಪಶ್ಚಿಮ ಬಂಗಾಳದ ಕಿರಿಯ ವೈದ್ಯರಿಗೆ ಸಾಥ್ ನೀಡಿದರು.
 
ವೈದ್ಯಕೀಯ ಸಮುದಾಯದ ಮುಷ್ಕರದಿಂದಾಗಿ ದೆಹಲಿ ಸೇರಿದಂತೆ ವಿವಿಧ ರಾಜ್ಯಗಳ ಪ್ರಮುಖ ನಗರಗಳಲ್ಲಿ ಖಾಸಗಿ ಆಸ್ಪತ್ರೆಗಳು ಕೂಡ ಸೂಕ್ತ ವೈದ್ಯಕೀಯ ಸೌಲಭ್ಯ ಸಿಗದೆ ಸಾರ್ವಜನಿಕರು ಪರದಾಡುವಂತಾಯಿತು. ಹೊರರೋಗಿಗಳ ವಿಭಾಗಗಳು ಬಹುತೇಕ ಬಂದ್ ಆಗಿದ್ದರಿಂದ ಅನಾರೋಗ್ಯಪೀಡಿತರು ಚಿಕಿತ್ಸೆ ಲಭಿಸದೆ ನರಳುವಂತಾಯಿತು.
ತುರ್ತು ಚಿಕಿತ್ಸೆ ಮತ್ತು ಅನಿವಾರ್ಯ ಶಸ್ತ್ರ ಕ್ರಿಯೆಗಳನ್ನು ಹೊರತುಪಡಿಸಿ ಉಳಿದೆಲ್ಲ ವೈದ್ಯರು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ. ಆಪರೇಷನ್ ಥಿಯೇಟರ್‍ಗಳಲ್ಲಿ ಶಸ್ತ್ರ ಚಿಕಿತ್ಸೆ ನಡೆಸುವ ವೈದ್ಯರು ತಮ್ಮ ತೋಳುಗಳಿಗೆ ಕಪ್ಪು ಪಟ್ಟಿ ಧರಿಸಿ ಕರ್ತವ್ಯದಲ್ಲಿ ಪಾಲ್ಗೊಂಡು ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.
ದೂರದ ಪ್ರದೇಶಗಳಿಂದ ಬಂದಿದ್ದ ಹೊರರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ಸಿಗದೆ ಆಸ್ಪತ್ರೆಯ ಆವರಣದಲ್ಲಿ ಬಳಲುತ್ತಿದ್ದ ದೃಶ್ಯಗಳು ಎಲ್ಲೆಡೆ ಸಾಮಾನ್ಯವಾಗಿ ಕಂಡುಬಂತು.
ಕೋಲ್ಕತ್ತಾ ವರದಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಕಿರಿಯ ವೈದ್ಯರ ಮುಷ್ಕರ ಇಂದು 7ನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ ದೇಶಾದ್ಯಂತ ವೈದ್ಯರು ತಮ್ಮ ಪ್ರತಿಭಟನೆಗೆ ನೀಡಿರವುದರಿಂದ ಮತ್ತಷ್ಟು ಉತ್ತೇಜನಗೊಂಡಿರುವ ಕಿರಿಯ ವೈದ್ಯರು ತಮ್ಮ ಪಟ್ಟನ್ನು ಸಡಿಸಲಿಸದೆ ಮುಷ್ಕರ ನಿರತರಾಗಿದ್ದಾರೆ.
ಈ ನಡುವೆ ವೈದ್ಯರ ಮನವೊಲಿಸುವ ಸರ್ಕಾರದ ಯತ್ನ ಮುಂದುವರೆದಿದೆ

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...