ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು; ನಗದು ಹಣ ದೋಚಿ ಪರಾರಿ

Source: sonews | By Staff Correspondent | Published on 17th October 2019, 5:44 PM | Coastal News | Incidents | Don't Miss |

ಭಟ್ಕಳ: ಮನೆಯ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಮನೆಯಲ್ಲಿದ್ದ 15ಸಾವಿರು ರೂ ನಗದು ದೋಚಿ ಪರಾರಿಯಾಗಿರುವ ಘಟನೆ ತಾಲೂಕಿನ ಪುರವರ್ಗ ಪಂಚಾಯತ್ ವ್ಯಾಪ್ತಿಯ ಮುಗುಳಿ ಹೊಂಡಾ ಚರ್ಚ್ ಬಳಿ ನಡೆದಿದೆ.

ಮುಹಮ್ಮದ್ ನಾಸಿರ್ ಬ್ಯಾರಿ ಎಂಬುವವರ ಮನೆಯೆ ಕಳ್ಳರು ಕನ್ನಹಾಕಿದ್ದು ಎನ್ನಲಾಗಿದ್ದು ಕಳೆದ ಎರಡು ದಿನಗಳಿಂದ ಮನೆಗೆ ಬೀಗ ಹಾಕಲಾಗಿದ್ದು ಇದನ್ನೆ ಬಳಸಿಕೊಂಡ ಕಳ್ಳರು ಮನೆಯ ಹಿಂಬದಿ ಬಾಗಿಲು ಬೀಗ ಮುರಿದು ಒಳ ನುಗ್ಗಿ ಹಣದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ನಸಿರ್ ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.   

ನಾಸಿರ್ ಕುಟುಂಬವು ಬುಧವಾರದಂದು ಮನೆಗೆ ಮರಳಿದಾಗ ಮನೆಯ ಹಿಂಬದಿಯ ಬಾಗಿಲು ತೆರದುಕೊಂಡಿದ್ದನ್ನು ನೋಡಿದ್ದಾರೆ. ಅಲ್ಲದೆ ವಸ್ತುಗಳು ಅಲ್ಲಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದ್ದನ್ನು ಗಮನಸಿ ತನ್ನ ಮನೆಯು ಕಳ್ಳತನಗೊಂಡಿದೆ ಎಂಬ ಖಾತ್ರಿಯಾದ ನಂತರ ಭಟ್ಕಳ ನಗರ ಠಾಣೆಗೆ ದೂರನ್ನು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...