ಕಾಂಗ್ರೆಸ್ ನಲ್ಲಿ ಯಾವುದೇ ಬಂಡಾಯವಿಲ್ಲ, ಸುಧಾರಣೆ ಮಾಡಿಕೊಳ್ಳಬೇಕಿದೆ-ಗುಲಾಂ ನಬಿ ಆಜಾದ್

Source: ANI | Published on 23rd November 2020, 12:31 AM | National News |

 


 
ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ, ಸುಧಾರಣೆಯನ್ನು ಎದುರು ನೋಡುತ್ತಿರುವುದಾಗಿ ಪಕ್ಷದ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಇತರ ಅಭ್ಯರ್ಥಿಗಳು ಇಲ್ಲ, ಪಕ್ಷಕ್ಕೆ ಅಗತ್ಯವಾದದ್ದನ್ನು ನಿರ್ದೇಶಿಸುವವರಲ್ಲಿ ನಾವೆಲ್ಲಾ ನಂಬಿಕೆ ಹೊಂದಿದ್ದೇವೆ ಎಂದು ಅವರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.
ಬಿಹಾರ ವಿಧಾನಸಭಾ ಹಾಗೂ ಉಪ ಚುನಾವಣೆಯಲ್ಲಿ ಕಳಪೆ ಸಾಧನೆ ಬಗ್ಗೆ ಆತಂಕಗೊಂಡಿದ್ದೇವೆ. ಸೋಲಿಗೆ ನಾಯಕತ್ವವನ್ನು ದೂಷಿಸುವುದಿಲ್ಲ, ತಳಮಟ್ಟದ ಕಾರ್ಯಕರ್ತರ ಜೊತೆಗೆ ಸಂಪರ್ಕ ಕಳೆದುಕೊಂಡಿದ್ದೇ ಸೋಲಿಗೆ ಕಾರಣ ಎಂದು ಹೇಳಿದರು.
ಚುನಾವಣೆ ವೇಳೆ ಅಭ್ಯರ್ಥಿಗಳು ಟಿಕೆಟ್ ಸಿಕ್ಕ ಕೂಡಲೇ 5 ಸ್ಟಾರ್ ಹೊಟೇಲ್‌ಗಳಲ್ಲಿ ರೂಂ ಬುಕ್ ಮಾಡಿಬಿಡ್ತಾರೆ. ಪಕ್ಷದ ಪರ ಪ್ರಚಾರಕ್ಕೆ ಕಚ್ಚಾ ರಸ್ತೆಗಳಲ್ಲಿ ತೆರಳೋದಿಲ್ಲ. ಈ 5 ಸ್ಟಾರ್ ಸಂಸ್ಕೃತಿ ಹೋಗುವವರೆಗೂ ಗೆಲುವು ಅಸಾಧ್ಯ ಎಂದು  ಆಜಾದ್ ತಿಳಿಸಿದ್ದಾರೆ.
ನಮ್ಮ ಕಾರ್ಯನಿರ್ವಹಣಾ ವಿಧಾನವನ್ನು ಪ್ರತಿ ಹಂತದಲ್ಲಿಯೂ ಸುಧಾರಣೆ ಮಾಡಿಕೊಳ್ಳಬೇಕಿದೆ. ಇಲ್ಲವಾದರೆ, ಅಭಿವೃದ್ಧಿ ಕಾಣಲು ಸಾಧ್ಯವಿಲ್ಲ ಎಂದಿರುವ ಗುಲಾಂ ನಬಿ ಆಜಾದ್, ಪಕ್ಷದ ವಿವಿಧ ಸ್ಥರಗಳಲ್ಲಿ ನೇಮಕಾತಿಗೆ ಚುನಾವಣೆಗಳು ನಡೆಯಬೇಕಿದೆ ಎಂದು ಆಗ್ರಹಿಸಿದ್ದಾರೆ

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...