ಬೆಂಗಳೂರು : ಕೋವಿಡ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿಧಿಸಿದ್ದ ವೀಕೆಂಡ್ ಕರ್ಪ್ಯೂವನ್ನ ರಾಜ್ಯ ಸರ್ಕಾರ ರದ್ದು ಮಾಡಿದೆ.
ಶುಕ್ರವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಸಿಎಂ ನೇತೃತ್ವದಲ್ಲಿ ತಜ್ಞರ ಸಭೆ ನಡೆಸಲಾಗಿದ್ದು, ಕೊರೊನಾ ಮೂರನೇ ಅಲೆ ತೀವ್ರತೆ ಜಾಸ್ತಿಯಾಗಿ ಕಾಡದೇ ಇರುವ ಕಾರಣಕ್ಕೆ ಅಪಾಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.
ಹೀಗಾಗಿ ರಾಜ್ಯದ ವಿವಿಧ ವಲಯಗಳ ಜನರು ವೀಕೆಂಡ್ ಕರ್ಪ್ಯೂ ಬೇಡ ಎಂದು ಹೇಳಿದ್ದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಆದರೆ ಪ್ರತಿದಿನ ರಾತ್ರಿ 10 ರಿಂದ ಮುಂಜಾನೆ ಐದು ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ತಿಳಿಸಲಾಗಿದೆ.
ಒಂದು ವೇಳೆ ಆಸ್ಪತ್ರೆ ಸೇರುವವರ ಸಂಖ್ಯೆ ಶೇ. ಐದಕ್ಕಿಂತ ಹೆಚ್ಚಾದಲ್ಲಿ ಮತ್ತೆ ಕಠಿಣ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಜಾತ್ರೆ, ಉತ್ಸವ ಹಾಗೂ ಪ್ರತಿಭಟನೆಗೆ ಯಾವುದೇ ರೀತಿಯಲ್ಲೂ ಅವಕಾಶವಿಲ್ಲ. ಸರ್ಕಾರದ ಗೈಡ್ ಲೈನ್ಸ್ ನ್ನು ಪ್ರತಿಯೊಬ್ಬರು ಫಾಲೋ ಮಾಡಬೇಕು ಎಂದು ಸಭೆ ಬಳಿಕ ಸಚಿವ ಆರ್ ಅಶೋಕ್ ಸೂಚನೆ ನೀಡಿದ್ದಾರೆ.