ವಿದ್ಯುತ್‌ ಕ್ಷೇತ್ರದಲ್ಲಿ ಸ್ಪರ್ಧೆ ಅಗತ್ಯ; ಆರ್.ಕೆ.ಸಿಂಗ್

Source: Vb | By I.G. Bhatkali | Published on 6th February 2023, 11:54 AM | State News |

ಬೆಂಗಳೂರು: ಸರಕಾರಿ ಸ್ವಾಮ್ಯದ ವಿದ್ಯುತ್ ಸರಬರಾಜು ಕಂಪೆನಿಗಳನ್ನು ಖಾಸಗೀಕರಣಗೊ ಳಿಸಬೇಕೆನ್ನುವುದು ನಮ್ಮ ಉದ್ದೇಶವಲ್ಲ. ಆದರೆ ಅವುಗಳ ನಡುವೆ ಸ್ಪರ್ಧಾತ್ಮಕತೆ ತರುವುದರಿಂದ ಬೇರೆ ಕಂಪೆನಿಗಳೂ ವಿದ್ಯುತ್‌ ವಿತರಣೆ ಮಾಡಲು ಅವಕಾಶ ಕಲ್ಪಿಸುವುದು ನಮ್ಮ ಉದ್ದೇಶ ಎಂದು ಕೇಂದ್ರ ಇಂಧನ, ನವೀನ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಆರ್. ಕೆ.ಸಿಂಗ್ ಸ್ಪಷ್ಟಪಡಿಸಿದ್ದಾರೆ.

ರವಿವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಲಾಗಿದ್ದ ಜಿ20 ರಾಷ್ಟ್ರಗಳ ಮೊದಲ ಎನರ್ಜಿ ಟ್ರಾನ್ಸಿಶನ್ ವರ್ಕಿಂಗ್ ಗ್ರೂಪ್ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯುತ್ ಸರಬರಾಜು ಕಂಪೆನಿಗಳ ನಡುವೆ ಸ್ಪರ್ಧೆ ಏರ್ಪಟ್ಟರೆ ಇಂಧನ ಉಳಿತಾಯದ ಜತೆಗೆ ಗ್ರಾಹಕರಿಗೆ ಕೈಗೆಟುಕುವ ದರಕ್ಕೆ ಇಂಧನ ದೊರೆಯುತ್ತದೆ. ಯಾವುದಾದರೂ ವಿದ್ಯುತ್‌ ಸರಬರಾಜು ಕಂಪೆನಿ ಸರಿಯಾಗಿ ಸೇವೆ ನೀಡದಿದ್ದರೆ, ಗ್ರಾಹಕರು ಮೊಬೈಲ್ ನೆಟ್ ವರ್ಕ್ ಸೇವೆಯ ರೀತಿ ವಿದ್ಯುತ್ ಸರಬರಾಜು ಕಂಪೆನಿಯನ್ನು ಬದಲಾಯಿಸಿಕೊಳ್ಳಬಹುದು ಎಂದು ತಿಳಿಸಿದರು.

ವಿದ್ಯುತ್‌ ಕ್ಷೇತ್ರದಲ್ಲಿ ಸ್ಪರ್ಧೆ ಇರಬೇಕು. ಗ್ರಿಡ್ ಗಳು ಸರಕಾರದ ಬಳಿಯೇ ಇರುತ್ತವೆ. ಕೇಂದ್ರ ಸರಕಾರವು ವಿದ್ಯುತ್‌ ವಿತರಣಾ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಕಾನೂನಿಗೆ ತಿದ್ದುಪಡಿ ಬಯಸಿದೆ. ಈ ಉದ್ದೇಶಿತ ತಿದ್ದುಪಡಿಗಳು ಇಂಧನ ಸುರಕ್ಷತೆ, ವಿತರಣಾ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ತರಲಿವೆ. ಇಂಧನ ಸರಬರಾಜು ನಷ್ಟ ತಗ್ಗಿ ಇಂಧನ ಉಳಿತಾಯದ ಪ್ರಮಾಣ ಹೆಚ್ಚುತ್ತದೆ. ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ಗುಣಮಟ್ಟದ ವಿದ್ಯುತ್ ಪೂರೈಕೆ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಮುಂಬೈಯಲ್ಲಿ ಖಾಸಗಿ ಸಂಸ್ಥೆಗಳಿಂದ ವಿದ್ಯುತ್‌ ಸರಬರಾಜು ಪೂರೈಕೆ ಆಗುತ್ತಿದೆ. ಆದರೆ ಕೆಲವು ಕಾರಣಗಳಿಂದ ಅದು ನಿರೀಕ್ಷಿತ ಯಶಸ್ಸು ಸಾಧಿಸಿಲ್ಲ. ಇಂತಹ ಸಮಸ್ಯೆಗಳನ್ನು ಕಾನೂನಿಗೆ ತಿದ್ದುಪಡಿ ತರುವ ಮೂಲಕ ಬಗೆಹರಿಸಲು ಬಯಸಿದ್ದೇವೆ ಎಂದು ಆರ್.ಕೆ.ಸಿಂಗ್ ತಿಳಿಸಿದರು.

ನವೀಕರಿಸಬಹುದಾದ ಇಂಧನ ಮೂಲಗಳ ಒತ್ತಡದ ಹೊರತಾಗಿಯೂ ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳ ತೆರವು ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಆರ್.ಕೆ.ಸಿಂಗ್, ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಅಂತಹ ವಿದ್ಯುತ್‌ ಸ್ಥಾವರಗಳು ಅತ್ಯಗತ್ಯ. ನವೀಕರಿಸಬಹು ದಾದ ಇಂಧನ ಕ್ಷಮತೆ ಸಾಧ್ಯವಾದಾಗ ಕಲ್ಲಿದ್ದಲು ಸ್ಥಾವರಗಳ ಕಾರ್ಯನಿರ್ವಹಣೆ ಸ್ಥಗಿತಗೊಳ್ಳುತ್ತದೆ. ಇಲ್ಲದೇ ಇದ್ದರೆ ಇಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಇಂಧನ ಸಚಿವಾಲ ಯದ ಕಾರ್ಯದರ್ಶಿ ಅಲೋಕ್ ಕುಮಾರ್, ಹೆಚ್ಚುವರಿ ಕಾರ್ಯದರ್ಶಿ ಅಜಯ್ ತಿವಾರಿ, ಪಿಐಬಿ ಬೆಂಗಳೂರಿನ ಹೆಚ್ಚುವರಿ ಮಹಾ ನಿರ್ದೇಶಕ ಎಸ್.ಜಿ.ರವೀಂದ್ರ ಉಪಸ್ಥಿತರಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...