ಶಿರಾಲಿಯ ಚಿತ್ರಾಪುರ ಮನೆಯೊಂದರಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳುವು

Source: sonews | By Staff Correspondent | Published on 24th July 2018, 6:29 PM | Coastal News | Don't Miss |

ಭಟ್ಕಳ: ತಾಲೂಕಿನ ಶಿರಾಲಿ ಗ್ರಾ.ಪಂ.ವ್ಯಾಪ್ತಿಯ ಚಿತ್ರಾಪುರದ ಮನೆಯೊಂದರ  ಬೀಗ ಮುರಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ  ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

ಶಿರಾಲಿ ಚಿತ್ರಪುರ ರೈಲ್ವೆ ಸೇತುವೆ ಬಳಿಯ ಶ್ರೀದೇವಿ ವೆಂಕಟರಮಣ ಭಟ್ಟ ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ  ಮನೆಯ ಬೀಗ ಮುರಿದ ಕಳ್ಳರು ಲಕ್ಷಾಂತರ ಮೌಲ್ಯದ ಒಡವೆಗಳನ್ನು ದೋಚಿಕೊಂಡಿದ್ದಾರೆ. 

ಸ್ಥಳಕ್ಕೆ ಶ್ವಾನದಳ.ಮತ್ತು ಬೆರಳು ಅಚ್ಚು ತಜ್ಞರು ಬಂದು  ಪರಿಶೀಲನೆ ಮಾಡಿದ್ದಾರೆ. ಈ ಕುರಿತಂತೆ ಭಟ್ಕಳ  ಗ್ರಾಮೀಣ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ. 

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...