ಪ್ರಗತಿಪರರಿಂದ ಈ ಸಲವು ಮಹಿಷ ದಸರಾ ಆಚರಣೆ

Source: sonews | By Staff Correspondent | Published on 22nd September 2020, 5:56 PM | State News | Don't Miss |

ಮೈಸೂರು: ಈ ಬಾರಿ ಮಹಿಷ ದಸರಾ ಆಚರಣೆ ಮಾಡಿಯೇ ತೀರುತ್ತೇವೆ, ತಾಕತ್ತಿದ್ದರೆ ತಡೆಯಲಿ ಎಂದು ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಎಲ್.ನಾಗೇಂದ್ರರಿಗೆ ಪ್ರಗತಿಪರರು ಸವಾಲು ಹಾಕಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ದಲಿತ ವೆಲ್ಫೇರ್ ಟ್ರಸ್ಟ್ ವತಿಯಿಂದ ನಡೆದ  ಸುದ್ದಿಗೋಷ್ಠಿಯಲ್ಲಿ ಪ್ರಗತಿಪರ ಚಿಂತಕರಾದ ಪ್ರೊ.ಕೆ.ಎಸ್.ಭಗವಾನ್, ಮಹೇಶ್ ಚಂದ್ರಗುರು, ಶಾಂತರಾಜು, ಪುರುಷೋತ್ತಮ್ ಮತ್ತು ಮಹದೇವಮೂರ್ತಿ ಮಾತನಾಡಿದರು.

ಮೊದಲಿಗೆ ದಲಿತ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಶಾಂತರಾಜು ಮಾತನಾಡಿ, ನಾವು ಯಾರ ಬಾವನೆಗಳಿಗೂ ಧಕ್ಕೆ ಬರದ ರೀತಿಯಲ್ಲಿ ಕಳೆದ ಆರು ವರ್ಷಗಳಿಂದಲೂ ಮಹಿಷ ದಸರಾ ಆಚರಣೆ ಮಾಡಿಕೊಂಡು ಬರುತಿದ್ದೇವೆ. ಆದರೆ ಕಳೆದ ವರ್ಷ ಸಂಸದ ಪ್ರತಾಪ್ ಸಿಂಹ ನಮ್ಮ ಆಚರಣೆಗೆ ಅಡ್ಡಿಪಡಿಸಿ ಈ ನೆಲದ ಮೂಲನಿವಾಸಿಗಳ ಭಾವನೆಗೆ ಧಕ್ಕೆ ತಂದರು. ಇತಿಹಾಸ ಗೊತ್ತಿಲ್ಲದ ಶಾಸಕ ಎಲ್.ನಾಗೇಂದ್ರ ಎಷ್ಟು ವರ್ಷದಿಂದ ಮಹಿಷ ದಸರಾ ಆಚರಣೆ ಮಾಡಲಾಗುತ್ತಿದೆ ಎಂಬ ಹೇಳಿಕೆ ನೀಡಿದ್ದಾರೆ. ಇವರಿಗೆ ಇತಿಹಾಸ ತಿಳಿಸುವ ಕೆಲಸವನ್ನು ಮಾಡಬೇಕಿದೆ. ಹಾಗಾಗಿ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ, ದೇಶದಲ್ಲಿ ಈ ಮೊದಲು ಇಬ್ಬರೊ ಮೂವರೊ ಮಹಾನ್ ನಾಯಕರ ಹುಟ್ಟುಹಬ್ಬ ಆಚರಣೆ ಮಾಡಲಾಗುತಿತ್ತು .ಇದೀಗ ಎಲ್ಲ ದಾರ್ಶನಿಕರ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಅದನ್ನು ನಾವುಗಳು ವಿರೋಧ ಮಾಡಿದ್ದೇವೆಯೇ? ಅದೇ ರೀತಿ ಈ ದೇಶದ ಮೂಲನಿವಾಸಿಗಳ ರಾಜ ಮಹಿಷ. ಅವರ ಇತಿಹಾಸವನ್ನು ತಿಳಿದುಕೊಂಡು ಹಬ್ಬ ಆಚರಣೆ ಮಾಡುತ್ತಿದ್ದೇವೆ. ಇಷ್ಟ ಇದ್ದವರು ಭಾಗವಹಿಸಬಹುದು, ಕಷ್ಟ ಆದವರು ಬಾಯಿ ಮುಚ್ಚಿಕೊಂಡು ಇರಬೇಕು. ನಮ್ಮ ಆಚರಣೆ ಸಂಸ್ಕೃತಿಗೆ ಧಕ್ಕೆ ತಂದರೆ ನಾವುಗಳು ಸಹ ಸುಮ್ಮನೇ ಕೂರಲು ಸಾಧ್ಯವಿಲ್ಲ ಎಂದು ಹೇಳಿದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...