ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು :     ಮುಖ್ಯಮಂತ್ರಿ ಸಿದ್ದರಾಮಯ್ಯ

Source: SOnews | By Staff Correspondent | Published on 24th February 2024, 5:15 PM | State News |

ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ

ಸಂವಿಧಾನದ ವಿರುದ್ಧದ ಅಪಪ್ರಚಾರವನ್ನು ಯಾರೂ ಸಹಿಸಬಾರದು

ಬೆಂಗಳೂರು: ನಾವು ಸಂವಿಧಾನದ ಮಾಲೀಕರು. ಸಂವಿಧಾನ ಕಿತ್ತು ಎಸೆಯುವುದರಲ್ಲಿ ನಮ್ಮ ಆಸಕಿಯಿಲ್ಲ, ಸಂವಿಧಾನದ  ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು ಎಂಬ ಅಬ್ರಹಾಂ ಲಿಂಕನ್ ಅವರ ಮಾತುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ  ಉಲ್ಲೇಖಿಸಿದರು.

ನಗರದ ಅರಮನೆ ಮೈದಾನದಲ್ಲಿ ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶ-2024 ಅನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನದ ವಿರುದ್ಧ ಎರಡು ಅಪಪ್ರಚಾರಗಳು ನಡೆಯುತ್ತಿದೆ. ಸಂವಿಧಾನ ದಲಿತರ ಉದ್ದಾರಕ್ಕಾಗಿದೆ  ಹಾಗೂ ಸಾಮಾಜಿಕ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿಲ್ಲ ಎಂದು ಅಪಪ್ರಚಾರ ಮಾಡುತ್ತಿದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವವನ್ನು ಸ್ಪಷ್ಟವಾಗಿ ಹೇಳುವುದರಿಂದ ಇದರ ವಿರುದ್ಧ ಇರುವ ಜನರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅರಿಯಬೇಕು. 1950 ಜನವರಿ 26 ರಿಂದ ಜಾರಿಗೆ ಬಂದಾಗಿನಿಂದ   ಅಪಪ್ರಚಾರ ನಡೆಯುತ್ತಿದೆ. ಇದನ್ನು ನಾವು ಯಾರೂ ಸಹಿಸಬಾರದು. ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ. ಇಲ್ಲದಿದ್ದರೆ ಅಪಾಯಕ್ಕೆ ಸಿಲುಕುತ್ತೇವೆ ಎಂದರು.

ಸಾಮಾಜಿಕ ಅಸಮಾನತೆಯನ್ನು ಅಳಿಸಿಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿ

ದೇಶದಲ್ಲಿ ಅಸಮಾನತೆಯನ್ನು ತೊಲಗಿಸಬೇಕು. ನಾವು ವೈರುಧ್ಯ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ. ಸಾಮಾಜಿಕ, ಆರ್ಥಿಕ ಅಸಮಾನತೆಯುಳ್ಳ ಸಮಾಜದಲ್ಲಿ ರಾಜಕೀಯ ಪ್ರಜಾಪ್ರಭುತ್ವ ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲೆ ನಿಂತಾಗ ಮಾತ್ರ ಯಶಸ್ವಿಯಾಗುತ್ತದೆ. ಇಲ್ಲದಿದ್ದರೆ ಅಸಮಾನತೆಯಿಂದ ನರಳುವವರು ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಹೇಳಿದ್ದರು. ಸಾಮಾಜಿಕ ಅಸಮಾನತೆಯನ್ನು ಅಳಿಸಿಹಾಕುವುದು ಪ್ರತಿ ಸರ್ಕಾರದ ಜವಾಬ್ದಾರಿ. ಸಂವಿಧಾನ ಯಶಸ್ವಿಯಾಗಲು ಇದು ಯಾರ ಕೈಯಲ್ಲಿ ಇದೆ ಎನ್ನುವುದು ಮುಖ್ಯ.

ಸಂವಿಧಾನ, ಸಮಾನತೆ, ಮಾನವ ಸಮಾಜದ ನಿರ್ಮಾಣದ  ಪರವಾಗಿರುವವರ ಕೈಯಲ್ಲಿದ್ದರೆ ಸಂವಿಧಾನ ಯಶಸ್ವಿಯಾಗುತ್ತದೆ. ಸಂವಿಧಾನಕ್ಕೆ ವಿರುದ್ಧವಾಗಿರುವವರ ಕೈಯಲ್ಲಿದ್ದರೆ ನಮಗೆ ಉಳಿಗಾಲವಿಲ್ಲ. ಸಂವಿಧಾನದ ಆಶಯಗಳು ಈಡೇರಲು ಸಂವಿಧಾನದ ಪರವಾಗಿರುವವರ ಕೈಯಲ್ಲಿ ಅಧಿಕಾರವಿರಬೇಕು ಎಂದರು.

ಸಂವಿಧಾನ ಜಾರಿಯಾದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಸಂವಿಧಾನದ ಪೀಠಿಕೆ, ಆಶಯಗಳನ್ನು ರಾಜ್ಯದ ಜನರು ಅರ್ಥ ಮಾಡಿಕೊಳ್ಳಬೇಕೆಂದು 2024 ಜನವರಿ 26 ರಿಂದ ರಾಜ್ಯದಲ್ಲಿ ಸಂವಿಧಾನ ಜಾಥಾ ಹಮ್ಮಿಕೊಳ್ಳಲಾಗಿದೆ. 31 ಜಿಲ್ಲೆಗಳಲ್ಲಿ ಸಂವಿಧಾನದ ಉದ್ದೇಶ, ಅಗತ್ಯ, ಅನಿವಾರ್ಯತೆಯನ್ನು ಜನರಿಗೆ ತಿಳಿಸುವ ಕೆಲಸ ಮಾಡಲಾಗಿದೆ. ಎರಡು ದಿನಗಳ ಕಾಲ ರಾಷ್ಟ್ರೀಯ ಏಕತೆ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಶ್ರೇಷ್ಠ ಸಂವಿಧಾನ

ಸಂವಿಧಾನವನ್ನು ಓದುವಂತೆ ಸಲಹೆ ನೀಡಿದ ಮುಖ್ಯಮಂತ್ರಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಅನೇಕ ದೇಶಗಳ ಸಂವಿಧಾನ ಓದಿ ಅರ್ಥ ಮಾಡಿಕೊಂಡು ದೇಶದ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ರೀತಿಯಲ್ಲಿ ಸಂವಿಧಾನ ರಚಿಸಿದ್ದಾರೆ. ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠ ಸಂವಿಧಾನ ಎಂದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಅತ್ಯುತ್ತಮ ಚಟುವಟಿಕೆ ಆಯೋಜಿಸಿದ್ದ  ತುಮಕೂರು ಜಿಲ್ಲೆ, ದಾವಣಗೆರೆಮೈಸೂರು, ಕೊಡಗು, ಬಳ್ಳಾರಿ ಜಿಲ್ಲೆಗಳಿಗೆ ಬಹುಮಾನ ಹಾಗೂ ನೆನಪಿನ ಕಾಣಿಕೆ  ವಿತರಿಸಿದರು.

ಈ ಸಂದರ್ಭದಲ್ಲಿ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್ ಹೊರಟ್ಟಿ, ಸಮಾಜ ಕಲ್ಯಾಣ ಸಚಿವ    ಡಾ: ಹೆಚ್.ಸಿ.ಮಹದೇವಪ್ಪ, ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ, ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್,ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಶಾಸಕ ಎಸ್. ಟಿ. ಸೋಮಶೇಖರ್, ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...