ಕಾರವಾರ: ಚಲಿಸುತ್ತಿದ್ದ ಬೈಕ್ ಗೆ ಹಿಂದಿನಿಂದ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಗುವನ್ನೂ ಸೇರಿ ಒಂದೇ ಕುಟುಂಬದ ಮೂವರು ಗಾಯಗೊಂಡ ಘಟನೆ ತಾಲೂಕಿನ ಸದಾಶಿವಗಡದಲ್ಲಿ ನಡೆದಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರ್ವೇಯರ್ ಆಗಿ ಕೆಲಸ ಮಾಡುತ್ತಿದ್ದ ಬಾಳಪ್ಪ ಫಕೀರಪ್ಪ ಚಿಪ್ಪಲಕಟ್ಟಿ (೨೯), ಬಾಳವ್ವ (೩೦) ಹಾಗೂ ರೇಣುಕಾ (೧೨) ಗಾಯಗೊಂಡವರು.
ಆಸ್ಪತ್ರೆಗೆ ಮಗುವನ್ನು ಕರೆದೊಯ್ದು ವಾಪಾಸ್ಸಾಗುತ್ತಿದ್ದ ವೇಳೆ ಸದಾಶಿವಗಡ ಗುಡ್ಡದ ಸಮೀಪ ಟಿಪ್ಪರ್ ಡಿಕ್ಕಿಯಾಗಿದೆ. ಪರಿಣಾಮ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚಿತ್ತಾಕುಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.