ರಸ್ತೆ ಅಪಘಾತ; ಮೂವರು ಬೈಕ್ ಸವಾರರು ಸ್ಥಳದಲ್ಲೇ ಸಾವು

Source: sonews | By Staff Correspondent | Published on 5th March 2020, 11:20 PM | State News | Incidents |

ಶ್ರೀನಿವಾಸಪುರ: ತಾಲ್ಲೂಕಿನ ಶ್ರೀನಿವಾಸಪುರ ಹೊಗಳಗೆರೆ ರಸ್ತೆಯ ಸಮೀಪ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿ ತೀತ್ರವಾಗಿ ಗಾಯಗೊಂಡಿದ್ದಾನೆ.

ಮೃತರನ್ನು ತಾಲ್ಲೂಕಿನ ಗಾಂಧಿನಗರ ಗ್ರಾಮದ ಯಶ್ವಂತ್‌ (20), ದೊಡ್ಡವೆಂಕಟೇಶಪ್ಪ (50), ಯಲ್ಲಪ್ಪ (18) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತೀವ್ರವಾಗಿ  ಗಾಯಹೊಂಡಿರುವ ಮೋನಹ್‌ ಕುಮಾರ್‌ (23) ಅವರನ್ನು ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಈ ನಾಲ್ವರು ಗುರುವಾರ ಬೆಳಿಗ್ಗೆ ಸುಮಾರು 5 ಗಂಟೆಯಲ್ಲಿ ಕಾರ್ಯನಿಮಿತ್ತ ಕೋಲಾರಕ್ಕೆ ಪಲ್ಸರ್‌ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.  ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕ್‌ ರೆಡ್ಡಿ, ಹೆಚ್ಚುವರಿ ವರಿಷ್ಠಾಧಿಕಾರಿ ಜಾಹ್ನವಿ, ಡಿವೈಎಸ್‌ಪಿ ನಾರಾಯಣಸ್ವಾಮಿ, ಪೊಲೀಸ್ ಸರ್ಕಲ್‌ ಇನ್ಸ್‌ಪೆಕ್ಟರ್‌ ಎನ್‌.ಕೆ.ರಾಘವೇಂದ್ರ ಪ್ರಕಾಶ್, ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ವಿಠಲ್‌ ತಳವಾರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...