ಗದಗ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ; ಸಾಲದ ವಿಷಯವಾಗಿ ಉಂಟಾದ ಮನಸ್ತಾಪ

Source: SOnews | By Staff Correspondent | Published on 4th March 2024, 3:24 PM | State News |

ಗದಗ : ಕೌಟುಂಬಿಕ ಕಲಹಕ್ಕೆ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಲ್ಲಿ ವರದಿಯಾಗಿದೆ.  

ಸಾಲದ ವಿಷಯವಾಗಿ ಉಂಟಾದ ಮನಸ್ತಾಪದಿಂದ ರೈಲು ಹಳಿಗೆ ಹಾರಿ ತಾಯಿ ರೇಣುಕಾ ತೇಲಿ (49) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದರೆ, ತಾಯಿಯನ್ನು ಕಾಪಾಡಲು ಹೋಗಿ ಹಳಿಗೆ ಬಿದ್ದ ಮಂಜುನಾಥ್ (22) ಮೃತಪಟ್ಟಿದ್ದಾರೆ. ಮತ್ತೊಂದೆಡೆ ತಾಯಿ-ಮಗನ ಸಾವಿನ ಸುದ್ದಿ ತಿಳಿದು ಸಾವಕ್ಕ ತೇಲಿ (47) ಎಂಬ ಮಹಿಳೆ ಕೂಡ ಮನೆಯಲ್ಲೇ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.   ಹಾವೇರಿ ಜಿಲ್ಲೆಯ ಎಲವಿಗಿ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಟ್ರ್ಯಾಕ್ಟರ್ ಸಾಲ ಕಟ್ಟುವ ವಿಷಯವಾಗಿ ಕುಟುಂಬದ ಸದಸ್ಯರು ಜಗಳವಾಡಿಕೊಂಡಿದ್ದರು ಎನ್ನಲಾಗಿದೆ.  

ಬ್ಯಾಂಕ್ ನಿಂದ 4 ಲಕ್ಷ ಸಾಲ ಪಡೆದು ಟ್ರ್ಯಾಕ್ಟರ್ ಖರೀದಿಸಿದ್ದರು. ಇದರ ಕಂತು ಕಟ್ಟುವ ವಿಚಾರದಲ್ಲಿ ನಡೆದ ಜಗಳ ಈ ಸಾವಿಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಕ್ಷ್ಮೇಶ್ವರ ಪೊಲೀಸರು ದೂರು ದಾಖಲಿಸಿ ತನಿಖೆ ಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...