ರಾಷ್ಟ್ರ ಗೀತೆಯ ಆಶಯಕ್ಕೆ ತಕ್ಕಂತೆ ನಡೆದುಕೊಳ್ಳಬೇಕು-ಜೆ.ಜಿ.ನಾಗರಾಜ್‌

Source: sonews | By Staff Correspondent | Published on 30th November 2019, 10:20 PM | State News |

ಶ್ರೀನಿವಾಸಪುರ: ಜನರು ನಾಡ ಗೀತೆ ಹಾಗೂ ರಾಷ್ಟ್ರ ಗೀತೆಯ ಆಶಯಕ್ಕೆ ತಕ್ಕಂತೆ ನಡೆದುಕೊಳ್ಳಬೇಕು ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ವೇದಿಕೆಯ ಜಿಲ್ಲಾಧ್ಯಕ್ಷ ಜೆ.ಜಿ.ನಾಗರಾಜ್‌ ಹೇಳಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ  ಜಿಲ್ಲಾ ಕನ್ನಡಸಿರಿ ಸಾಹಿತ್ಯ ಪರಿಷತ್ತಿನ ವತಿಯಿಂದ ಶನಿವಾರ ಏರ್ಪಡಿಸಿದ್ದ ಪರಿಷತ್ತಿನ ವರ್ಷದ ಅವಲೋಕನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾಡಗೀತೆಯಲ್ಲಿ ಪ್ರತಿ ದಿನ ಸರ್ವ ಜನಾಂಗದ ಸುಂದರ ತೋಟ ಎಂದು ಹಾಡುವ ನಾವು, ಎಲ್ಲರಲ್ಲೂ ಪ್ರೀತಿಯನ್ನು ಕಾಣುತ್ತೇವೆ. ಇದು ಸಮರಸದ ಜೀವನಕ್ಕೆ ಅತ್ಯಗತ್ಯ ಎಂದು ಹೇಳಿದರು.

ಕರ್ನಾಟಕದ ರಾಜಧಾನಿಯಾದ ಬೆಂಗಳೂರಿನಲ್ಲಿ ಶೇ.27 ರಷ್ಟು ಕನ್ನಡಿಗರಿದ್ದಾರೆ. ಸರ್ಕಾರ ಕನ್ನಡ ಶಾಲೆಗಳ ಅಭಿವೃದ್ಧಿಗೆ ಇನ್ನಷ್ಟು ಗಮನ ನೀಡಬೇಕು. ಮಕ್ಕಳು ಸರ್ಕಾರಿ ಶಾಲೆ ಸೇರುವಂಥ ವಾತಾವರಣ ನಿರ್ಮಾಣ ಮಾಡಬೇಕು. ಸರ್ಕಾರ ಹಾಗೂ ಕನ್ನಡ ಪರ ಸಂಘಟನೆಗಳು ನಾಡು ನುಡಿಯ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಹೇಳಿದರು.

ಕನ್ನಡ ಸಿರಿ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಕೆ.ನರಸಿಂಹಮೂರ್ತಿ ಆಶಯ ಭಾಷಣ ಮಾಡಿದರು. ವಿಜ್ಞಾನ ಲೇಖಕ ಎಚ್‌.ಎನ್‌.ಪುರುಷೋತ್ತಮರಾವ್‌ ಕನ್ನಡ ಭಾಷೆಯ ಸಮಸ್ಯೆಗಳು ಎಂಬ ವಿಷಯದ ಬಗ್ಗೆ ಮಾತನಾಡಿದರು. ಕನ್ನಡ ಸಿರಿ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಖಜಾಂಚಿ ಕೆ.ಎನ್‌.ಪರಮೇಶ್ವರನ್‌ ಕನ್ನಡ ಅಂದು, ಇಂದು, ಮುಂದೆ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾಧ್ಯಕ್ಷ ಟಿ.ಸುಬ್ಬರಾಮಯ್ಯ ಪರಿಷತ್ತಿನ ಸಾಧನೆ ಕುರಿತು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಎಂ.ನಾರಾಯಣಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಪರ ಸಂಘಟನೆಗಳು ಸಮಾಜ ಮುಖಿಯಾಗಿ ಕಾರ್ಯನಿರ್ವಹಿಸಬೇಕು. ನಾಡು ನುಡಿ ಸೇವೆಯಲ್ಲಿ ತೊಡಗಬೇಕು. ಸಮಾಜಕ್ಕೆ ನೀಡುವ ಕೊಡುಗೆ ಶಾಶ್ವತವಾಗಿ ಉಳಿಯುತ್ತದೆ ಎಂದು ಹೇಳಿದರು.

ತಾಲ್ಲೂಕು ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ಎನ್‌.ಮುನಿವೆಂಕಟೇಗೌಡ, ಭಾರತ ಸೇವಾ ದಳದ ತಾಲ್ಲೂಕು ಘಟಕದ ಅಧ್ಯಕ್ಷ ಡಾ. ಆರ್‌.ರವಿಕುಮಾರ್‌, ಪ್ರಾಂಶುಪಾಲ ಶ್ರೀನಿವಾಸಯ್ಯ, ಜನಪದ ಗಾಯಕ ದೊಡಮಲದೊಡ್ಡಿ ನಾರಾಯಣಸ್ವಾಮಿ, ದಲಿತ ಮುಖಂಡ ಕೂಸಂದ್ರ ರೆಡ್ಡಪ್ಪ, ಕರ್ನಾಟಕ ರಕ್ಷಣಾ ವೇದಿಕೆಯ , ಹರೀಶ್‌, ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಎಂ.ಚಂದ್ರಶೇಖರ್‌ ಇದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...