ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉನ್ನತಿಕರಣಗೊಳಿಸಲು ಟ್ವೀಟರ್ ಅಭಿಯಾನ.

Source: SO News | By Laxmi Tanaya | Published on 16th September 2020, 6:15 PM | National News | Don't Miss |

ಮಂಗಳೂರು‌ : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೂರ್ಣ ಅಭಿವೃದ್ಧಿ ಸಾಮರ್ಥ್ಯವನ್ನು ಉನ್ನತೀಕರಣಗೊಳಿಸಬೇಕು ಎಂಬ ಹಕ್ಕೊತ್ತಾಯದ 12 ಗಂಟೆಗಳ ಟ್ವಿಟರ್ ಅಭಿಯಾನಕ್ಕೆ‌ ಫ್ಲೈಫ್ರಂಐಎಕ್ಸ್‌ಇ(#FlyFromIXE)ಗೆ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಸಾವಿರಕ್ಕೂ ಅಧಿಕ ಮಂದಿ ಈ ಹ್ಯಾಷ್‌ಟ್ಯಾಗ್ ಸಹಿತ ಟ್ವೀಟ್ ಮಾಡಿ ಮಂಗಳೂರು ವಿಮಾನ ನಿಲ್ದಾಣದ ಅಭಿವೃದ್ಧಿಗೆ ಒತ್ತಾಯಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದ ಮೂಲಸೌಲಭ್ಯಗಳನ್ನು ಸರ್ವಾಂಗೀಣ ಅಭಿವೃದ್ಧಿಪಡಿಸಬೇಕು ಎಂಬುದಕ್ಕಾಗಿ ಅಭಿಯಾನ ಹಮ್ಮಿಕೊಳ್ಳಲಾಗಿದೆ, ಇದು ಸಾಕಷ್ಟು ಟ್ರೆಂಡ್ ಆಗಿತ್ತು. ಆದರೆ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಬಿಟ್ಟರೆ ಜನಪ್ರತಿನಿಧಿಗಳು ಇದರಲ್ಲಿ ಸಹಭಾಗಿತ್ವ ಕೊಟ್ಟಿಲ್ಲ ಎನ್ನುವುದು ನಿರಾಶಾದಾಯಕ ಎಂದು ಸಂಘಟಕರಲ್ಲೊಬ್ಬರು ತಿಳಿಸಿದ್ದಾರೆ.

ಮುಂದೆಯೂ ಈ ಹ್ಯಾಶ್‌ಟ್ಯಾಗ್ ಉಳಿಸಿಕೊಂಡು ವಾಟ್ಸಾೃಪ್ ಗ್ರೂಪ್ ರಚಿಸಿ ಈ ಒತ್ತಾಯವನ್ನು ಜೀವಂತವಾಗಿ ಇರಿಸಿಕೊಳ್ಳುತ್ತ ಸರ್ಕಾರವನ್ನು ಒತ್ತಾಯಿಸುವುದಕ್ಕೆ ತೀರ್ಮಾನಿಸಲಾಗಿದೆ. ಅಭಿಯಾನದಲ್ಲಿ ಅನೇಕರು ಕೇಂದ್ರ ವಿಮಾನಯಾನ ಸಚಿವ ಹರ್ದೀಪ್ ಪುರಿ ಅವರನ್ನು ಟ್ಯಾಗ್ ಮಾಡಿದ್ದಾರೆ. ಮಂಗಳೂರು ವಿಮಾನ ನಿಲ್ದಾಣವನ್ನು ವಹಿಸಿಕೊಂಡಿರುವ ಅದಾನಿ ಗ್ರೂಪ್‌ನ್ನೂ ಟ್ಯಾಗ್ ಮಾಡಲಾಗಿದೆ.

ವಿಮಾನಗಳ ಇಂಧನ ಮೇಲಿನ ಶೇ.28ರಷ್ಟು ಮೌಲ್ಯವರ್ಧಿತ ತೆರಿಗೆ ಹೇರಿರುವುದು ಮಂಗಳೂರು ವಿಮಾನ ನಿಲ್ದಾಣಕ್ಕೆ ಹೇಗೆ ತೊಂದರೆ ಉಂಟು ಮಾಡಿದೆ ಎಂಬ ಬಗ್ಗೆ ಅನೇಕರು ಸಂದೇಶದಲ್ಲಿ ಗಮನಸೆಳೆದಿದ್ದಾರೆ. ಮಂಗಳೂರಿಗೆ ಇನ್ನಷ್ಟು ವಿಮಾನಗಳು ಬರಬೇಕು, ದೇಶೀಯ ವಿಮಾನಗಳ ಹಾರಾಟವೂ ಹೆಚ್ಚಬೇಕು, ಆ ನಿಟ್ಟಿನಲ್ಲಿ ಪ್ರಯತ್ನ ಸಾಗಲಿದೆ ಎಂದು ಸಂಘಟಕರಲ್ಲೊಬ್ಬರಾದ ಶ್ರೀಕರ ತಿಳಿಸಿದ್ದಾರೆ. ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಟ್ವೀಟ್ ಅಭಿಯಾನ ನಡೆಯಿತು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...