ಮಂಕಿ ಸಮುದ್ರಕ್ಕೆ ಈಜಲು ಹೋದ ಮಕ್ಕಳೀರ್ವರ ಸಾವು

Source: S O News | By I.G. Bhatkali | Published on 16th January 2022, 12:38 PM | Coastal News | Don't Miss |

ಭಟ್ಕಳ: ಹೊನ್ನಾವರದ  ಮಂಕಿ ಸಮುದ್ರಕ್ಕೆ ಈಜಲು ಹೋದ ಇಬ್ಬರು ಮಕ್ಕಳು ನೀರಿನ ಸುಳಿಗೆ ಸಿಕ್ಕಿ ಮೃತ ಪಟ್ಟ ಘಟನೆ ಶನಿವಾರ ಮಧ್ಯಾಹ್ನ ಸುಮಾರು 3 ಗಂಟೆಗೆ  ನಡೆದಿದೆ.

ಮೃತ ಮಕ್ಕಳು ಮನೋಜ ಬಾಬು ನಾಯ್ಕ (15) ಹಾಗೂ ದರ್ಶನ ಉದಯ ನಾಯ್ಕ  (16) ಎಂದು ಗುರುತಿಸಲಾಗಿದೆ. ಮೃತಪಟ್ಟ ದುರ್ದೈವಿಗಳು ನಾಲೈದು ಮಕ್ಕಳೊಂದಿಗೆ ಮಂಕಿ ತಾಳಮಕ್ಕಿ ಬಳಿ ಸಮುದ್ರಕ್ಕೆ ಈಜಲು ತೆರಳಿದ್ದರು.

ಇವರಿಬ್ಬರೂ ಸಮೀಪದ ಕನ್ನಡ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದರು ಎಂದು ತಿಳಿದು ಬಂದಿದೆ.

ಮೊದಲು ಮನೋಜ ಸಮುದ್ರದ ಸುಳಿಗೆ ಸಿಕ್ಕಾಗ ಆತನನ್ನು ರಕ್ಷಿಸಲು ದರ್ಶನ ಹೋಗಿದ್ದ. ಇಬ್ಬರು ಸಮುದ್ರ ಸುಳಿಗೆ ಸಿಕ್ಕಿ ಮೃತಪಟ್ಟಿದ್ದಾರೆ.

ವಿಷಯ ತಿಳಿದು ಅಲ್ಲಿರುವ ಸುಮಾರು 20 ಮೀನುಗಾರರು ತಕ್ಷಣ ನೀರಿಗೆ ಇಳಿದರೂ ಎನು ಪ್ರಯೋಜನವಾಗಿಲ್ಲ. ಮನೋಜನನ್ನು ತಕ್ಷಣ ಹಿಡಿದರು ಕೂಡ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದ್ದಿದ್ದಾನೆ.

ದರ್ಶನ ಶವ ತಕ್ಷಣ ದೊರೆತ್ತಿದ್ದು ಮಂಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪಿ.ಎಸ್.ಐ ಅಶೋಕ ಎಮ್ ತನಿಖೆ ನಡೆಸುತ್ತಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...