ಮಂಕಿ ಸಮುದ್ರಕ್ಕೆ ಈಜಲು ಹೋದ ಮಕ್ಕಳೀರ್ವರ ಸಾವು
ಭಟ್ಕಳ: ಹೊನ್ನಾವರದ ಮಂಕಿ ಸಮುದ್ರಕ್ಕೆ ಈಜಲು ಹೋದ ಇಬ್ಬರು ಮಕ್ಕಳು ನೀರಿನ ಸುಳಿಗೆ ಸಿಕ್ಕಿ ಮೃತ ಪಟ್ಟ ಘಟನೆ ಶನಿವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ನಡೆದಿದೆ.
ಮೃತ ಮಕ್ಕಳು ಮನೋಜ ಬಾಬು ನಾಯ್ಕ (15) ಹಾಗೂ ದರ್ಶನ ಉದಯ ನಾಯ್ಕ (16) ಎಂದು ಗುರುತಿಸಲಾಗಿದೆ. ಮೃತಪಟ್ಟ ದುರ್ದೈವಿಗಳು ನಾಲೈದು ಮಕ್ಕಳೊಂದಿಗೆ ಮಂಕಿ ತಾಳಮಕ್ಕಿ ಬಳಿ ಸಮುದ್ರಕ್ಕೆ ಈಜಲು ತೆರಳಿದ್ದರು.
ಇವರಿಬ್ಬರೂ ಸಮೀಪದ ಕನ್ನಡ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದರು ಎಂದು ತಿಳಿದು ಬಂದಿದೆ.
ಮೊದಲು ಮನೋಜ ಸಮುದ್ರದ ಸುಳಿಗೆ ಸಿಕ್ಕಾಗ ಆತನನ್ನು ರಕ್ಷಿಸಲು ದರ್ಶನ ಹೋಗಿದ್ದ. ಇಬ್ಬರು ಸಮುದ್ರ ಸುಳಿಗೆ ಸಿಕ್ಕಿ ಮೃತಪಟ್ಟಿದ್ದಾರೆ.
ವಿಷಯ ತಿಳಿದು ಅಲ್ಲಿರುವ ಸುಮಾರು 20 ಮೀನುಗಾರರು ತಕ್ಷಣ ನೀರಿಗೆ ಇಳಿದರೂ ಎನು ಪ್ರಯೋಜನವಾಗಿಲ್ಲ. ಮನೋಜನನ್ನು ತಕ್ಷಣ ಹಿಡಿದರು ಕೂಡ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದ್ದಿದ್ದಾನೆ.
ದರ್ಶನ ಶವ ತಕ್ಷಣ ದೊರೆತ್ತಿದ್ದು ಮಂಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪಿ.ಎಸ್.ಐ ಅಶೋಕ ಎಮ್ ತನಿಖೆ ನಡೆಸುತ್ತಿದ್ದಾರೆ.