ಯಲ್ಲಾಪುರ: ವೇಗದ ಬೈಕ್ ಚಾಲನೆ. ಕಾರಿಗೆ ಢಿಕ್ಕಿ ಹೊಡೆದು ಇಬ್ಬರ ದುರ್ಮರಣ. ಮತ್ತೋರ್ವ ಗಂಭೀರ

Source: SO News | By Laxmi Tanaya | Published on 15th October 2023, 10:10 PM | Coastal News | Don't Miss |

ಯಲ್ಲಾಪುರ : ಪಟ್ಟಣದ ರಾ. ಹೆದ್ದಾರಿಯಲ್ಲಿ ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿ‌ ಸಾವನ್ನಪ್ಪಿದ ಘಟನೆ ರವಿವಾರ ನಡೆದಿದೆ. 

ಅಪಘಾತದಲ್ಲಿ ಇನ್ನೋರ್ವ  ಗಾಯಗೊಂಡಿದ್ದಾನೆ.  ಪಟ್ಟಣದ ತಟಗಾರ ಅಡ್ಡ ರಸ್ತೆ ಬಳಿ‌ ಈ ಅಪಘಾತ ಸಂಭವಿಸಿದೆ.    ರಾಮನಕೊಪ್ಪದ ದರ್ಶನ  ಭಂಡಾರಿ (17),  ಹುಣಶೆಟ್ಟಿಕೊಪ್ಪದ ರಾಜೇಶ ಆಚಾರಿ (18) ಮೃತ ದುರ್ದೈವಿಗಳಾಗಿದ್ದಾರೆ. ಮಂಜುನಾಥ ನಗರದ ಜಾಬೀರ್ ಮಹಮ್ಮದ್ ಗೌಸ್ ಎಂಬಾತನಿಗೆ ಗಂಭೀರ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿದೆ. 

 ಅತಿವೇಗವಾಗಿ ಬೈಕ್ ಓಡಿಸಿದ್ದರಿಂದಲೇ ನಿಂತ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...