ನದಿಯಲ್ಲಿ ಮೀನುಗಾರಿಕೆ ತೆರಳಿದ್ದ ಯುವಕರಿಬ್ಬರು‌ ನೀರಿನಲ್ಲಿ ಮುಳುಗಿ ಸಾವು…

Source: so news | Published on 3rd July 2020, 12:31 PM | Coastal News | Don't Miss |

ಉಡುಪಿ : ಉಡುಪಿ ಜಿಲ್ಲೆಯ ಬಾರ್ಕೂರಿನ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬಾರ್ಕೂರಿನಲ್ಲಿ ಶುಕ್ರವಾರ ನಡೆದಿದೆ‌ ಎನ್ನಲಾಗಿದೆ.
ಮೃತಪಟ್ಟ ಯುವಕರನ್ನು ಬಾರ್ಕೂರು ಹೊಸಾಳಕೌಲೇಶ್ವರಚೌಳಿಕೆರೆ ಗ್ರಾಮದ ಹರ್ಷ (25) ಮತ್ತು ಕಾರ್ತಿಕ್ (21) ಎಂದು ತಿಳಿದು ಬಂದಿದೆ.
ನಿನ್ನೆ ರಾತ್ರಿ ಯುವಕರು ನದಿಯಲ್ಲಿ ಬಲೆ ಬೀಸಿ ಹೋಗಿದ್ದು ಶುಕ್ರವಾರ ಮುಂಜಾನೆ ಅದನ್ನು ತರಲು ತೆರಳಿದ್ದು ನೀರಿನಲ್ಲಿ ಇಳಿದು ಬಲೆಯನ್ನು ಎಳೆಯುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ ಎನ್ನಲಾಗಿದೆ.ನದಿಯ ಬಳಿಯ ನಿವಾಸಿಗಳಾದ ಮೃತರ ಸ್ನೇಹಿತರಾದ ರವಿತೇಜಾ ಮತ್ತು ಮಧುಕರಬರುವ ಮೊದಲೇ ಇಬ್ಬರು ನದಿಗೆ ಹಾರಿ ನಿನ್ನೆ ಹಾಕಿದ್ದ ಬಲೇ ತೆಗೆಯಲು ನೀರಿಗೆ ಇಳಿದಾಗ ಈ ದುರ್ಘಟನೆ ನಡೆದಿದೆ.
ಮೃತ ಹರ್ಷ ಖಾಸಗಿ ಫೆನ್ಸಾನ್ಸ್ ಕಂಪೆನಿಯಲ್ಲಿ ಸಾಲ ವಸೂಲಿ ಕೆಲಸ ಮಾಡಿಕೊಂಡಿದ್ದು,ಕಾರ್ತಿಕ್ ಕೊನೆಯ ವರ್ಷದ ಬಿಕಾಂ ವಿದ್ಯಾರ್ಥಿಯಾಗಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...