ಬಹುತ್ವದ ಭಾರತಕ್ಕೆ ಏಕರೂಪ ನಾಗರಿಕ ಸಂಹಿತೆ ಸೂಕ್ತವಲ್ಲ: ಜಮಾಅತೆ ಇಸ್ಲಾಮೀ ಹಿಂದ್

Source: SOnews | By Staff Correspondent | Published on 12th July 2023, 7:03 PM | National News |

ದೆಹಲಿ: ಏಕರೂಪ ನಾಗರಿಕ ಸಂಹಿತೆಯು ಭಾರತದಂತಹ ಬಹುತ್ವದ ದೇಶಕ್ಕೆ ಸೂಕ್ತವಾದುದಲ್ಲ ಎಂದು ಜಮಾಅತೆ ಇಸ್ಲಾಮಿ ಹಿಂದ್ ಅಭಿಪ್ರಾಯ ಪಟ್ಟಿದೆ.

ಅನೇಕ ಧರ್ಮಗಳು ಸಂಸ್ಕೃತಿ ಮತ್ತು ಆಚರಣೆಗಳುಳ್ಳ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಯಾವ ಕಾರಣಕ್ಕೂ ಸೂಕ್ತವಲ್ಲ. ವ್ಯಕ್ತಿ ನಿಯಮಗಳಲ್ಲಿ ಯಾವುದೇ ಪರಿಷ್ಕರಣೆಯನ್ನು ಆಯಾ ಸಮುದಾಯಗಳ ಒಳಗಿನಿಂದಲೇ ಮಾಡುವಂತಾಗಬೇಕೆ ಹೊರತು ಕಾನೂನುಗಳ ಮೂಲಕ ಅದನ್ನು ಜಾರಿಗೊಳಿಸಲು ಹೊರಟರೆ ಪ್ರತಿರೋಧಗಳು ಎದುರಾಗಬಹುದು ಎಂದು ರಾಷ್ಟ್ರೀಯ ಕಾನೂನು ಆಯೋಗಕ್ಕೆ ಬರೆದ ಪತ್ರದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ರಾಷ್ಟ್ರೀಯ ಉಪಾಧ್ಯಕ್ಷ ಮಲಿಕ್ ಮುಹತಸಿಮ್ ಖಾನ್ ತಿಳಿಸಿದ್ದಾರೆ.

21ನೇ ಕಾನೂನು ಆಯೋಗವು 2016-18ರಲ್ಲಿ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಬಿಡುಗಡೆಗೊಳಿಸಿದ ವರದಿಯ ಬಗ್ಗೆಯೂ ಈ ಪತ್ರದಲ್ಲಿ ನೆನಪಿಸಲಾಗಿದೆ.

ಭಾರತಕ್ಕೆ ಏಕರೂಪ ನಾಗರಿಕ ಸಂಹಿತೆ ಸೂಕ್ತವಲ್ಲ ಎಂದು ಆ ಸಂದರ್ಭದಲ್ಲಿ ಆಯೋಗ ಅಭಿಪ್ರಾಯಪಟ್ಟಿತ್ತು. ಇದರ ಹೊರತಾಗಿಯೂ ಇದೀಗ ಏಕರೂಪ ನಾಗರಿಕ ಸಂಹಿತೆಯನ್ನು ಮುಂಚೂಣಿಗೆ ತಂದಿರುವುದರ ಔಚಿತ್ಯವು ಪ್ರಶ್ನಾರ್ಹವಾಗಿದೆ. ಲೋಕಸಭಾ ಚುನಾವಣೆಗೆ ತಿಂಗಳುಗಳಷ್ಟೇ ಉಳಿದಿರುವಾಗ ಏಕರೂಪ ನಾಗರಿಕ ಸಂಹಿತೆಯನ್ನು ಚರ್ಚೆಗೊಳಪಡಿಸುವುದರ ಹಿಂದೆ ರಾಜಕೀಯ ಉದ್ದೇಶ ಇದೆ ಎಂದು ಅವರು ಹೇಳಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...