ಶಿಂದೆ ಬಣ 'ಅಸಲಿ' ಶಿವಸೇನೆ, ಇ.ಸಿ. ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಉದ್ಧವ್ ಠಾಕ್ರೆ

Source: Vb | By I.G. Bhatkali | Published on 21st February 2023, 1:52 PM | National News |

ಹೊಸದಿಲ್ಲಿ: ಏಕನಾಥ್ ಶಿಂದೆ ನೇತೃತ್ವದ ಬಣ ನಿಜವಾದ ಶಿವಸೇನೆ ಎಂದು ಚುನಾವಣಾ ಆಯೋಗ ನೀಡಿದ ಆದೇಶ ಪ್ರಶ್ನಿಸಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸೋಮವಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಹಿರಿಯ ವಕೀಲ ಅಭಿಷೇಕ್ ಮನು ಸಿಂಘೀ ಅವರು ಪ್ರಕರಣವನ್ನು ಶೀಘ್ರ ಪಟ್ಟಿ ಮಾಡುವಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಲ್ಲಿ ಮನವಿ ಮಾಡಿದರು. ಆದರೆ, ಈ ವಿಷಯ ಉಲ್ಲೇಖಿಸಲಾದ ಪಟ್ಟಿಯ ಭಾಗವಾಗಿರಲಿಲ್ಲ. ಆದುದರಿಂದ ಯಾವುದೇ ಆದೇಶ ನೀಡಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

“ಎಡ, ಬಲ ಅಥವಾ ಕೇಂದ್ರ, ಯಾವುದೇ ಆಗಿದ್ದರೂ ನಿಯಮಗಳು ಎಲ್ಲರಿಗೂ ಸಮಾನವಾಗಿ ಅನ್ವಯವಾಗುತ್ತದೆ. ಸೂಕ್ತ ಪ್ರಕ್ರಿಯೆಯ ಮೂಲಕ ನಾಳೆ ಬನ್ನಿ' ಎಂದು ಅವರು ಹೇಳಿದರು. ಕಳೆದ ವರ್ಷ ಜೂನ್‌ನಲ್ಲಿ ಶಿಂದೆ ನೇತೃತ್ವದ ಶಾಸಕರ ಗುಂಪು ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದಿತ್ತು. ಶಿವಸೇನೆ ಎರಡು ಹೋಳಾಗಿತ್ತು. ಇದರಿಂದ ಈ ಹಿಂದಿನ ಶಿವಸೇನೆ, ಎನ್‌ಸಿಪಿ ಹಾಗೂ ಕಾಂಗ್ರೆಸ್ ನೇತೃತ್ವದ ಆಡಳಿತಾರೂಢ ಮಹಾರಾಷ್ಟ್ರ ಸರಕಾರ ಕುಸಿದು ಬಿದ್ದಿತ್ತು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...