ಹಿಜಾಬ್ ಧರಿಸಲು ಅವಕಾಶ ಕಲ್ಪಿಸದಿದ್ದರೆ ಉಗ್ರ ಪ್ರತಿಭಟನೆ, ಕಾನೂನು ಹೋರಾಟ: ಮಸೂದ್ ಮನ್ನಾ

Source: S O News | By I.G. Bhatkali | Published on 2nd January 2022, 8:10 AM | Coastal News |

ಉಡುಪಿ: ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ತರಗತಿ ಹಾಜರಾಗಲು ಅವಕಾಶ ನಿರಾಕರಿಸಲಾಗಿದ್ದು, ಇದರ ವಿರುದ್ಧ ಉಗ್ರ ಪ್ರತಿಭಟನೆ ಹಾಗೂ ಕಾನೂನು ಹೋರಾಟ ನಡೆಸಲಾಗುವುದು ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಸಮಿತಿ ಸದಸ್ಯ ಮಸೂದ್‌ ಮನ್ನಾ ತಿಳಿಸಿದ್ದಾರೆ. 

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲೇಜಿನಲ್ಲಿ ಈ ಹಿಂದಿನಿಂದಲೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುತ್ತಿದ್ದರು. ಈ ಮೊದಲು ಹಿಜಾಬ್ ಧರಿಸಲು ಅವಕಾಶ ಇಲ್ಲದಿದ್ದರೂ ಇದೀಗ ತೀವ್ರವಾ ಗಿದೆ. ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿದ ಕಾರಣ ಅವರನ್ನು ತರಗತಿಯಿಂದ ಹೊರ ಹಾಕಲಾಗಿದೆ. ಇದು ಧಾರ್ಮಿಕ ತಾರತಮ್ಯವಾಗಿದೆ ಎಂದರು.

ಇತರ ಯಾವುದೇ ಸರಕಾರಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಈ ರೀತಿಯ ನಿರ್ಬಂಧ ಇಲ್ಲ. ಇಲ್ಲಿನ ಕೋಮು ಸೌಹಾರ್ದತೆ ಕೆಡಿಸುವ ಉದ್ದೇಶದಿಂದ ಈ ರೀತಿ ವಿವಾದ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಪ್ರಾಂಶುಪಾಲರು, ಡಿಡಿಪಿಯು ಅವರ ಹಿಂದೆ ಕಾಣದ ಶಕ್ತಿಯೊಂದು ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಕಾಲೇಜಿನ ಪ್ರಾಂಶುಪಾಲರನ್ನು ವಜಾಗೊಳಿಸಬೇಕು. ಅದಲ್ಲದೇ ಪ್ರಾಧ್ಯಾಪಕರು ಹಾಜರಾತಿ ನೀಡದ ಕಾರಣ ಅವರ ಮೇಲೂ ಕಠಿಣ ಕ್ರಮ ಜರಗಿಸಬೇಕು. ಅಲ್ಲಿ ನಡೆಯುತ್ತಿರುವ ಧಾರ್ಮಿಕ ತಾರತಮ್ಯವನ್ನು ನಿಲ್ಲಿಸಿ ವಿದ್ಯಾರ್ಥಿನಿಯರಿಗೆ ನ್ಯಾಯ ದೊರಕಬೇಕು. ಇಲ್ಲದಿದ್ದರೆ ತೀವ್ರ ರೀತಿಯ ಹೋರಾಟವನ್ನು ಎದುರಿಸಬೇಕಾಗಬಹುದು ಎಂದು ಅವರು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಿಎಫ್‌ಐ ಜಿಲ್ಲಾಧ್ಯಕ್ಷ ಅಸೀಲ್ ಅಕ್ರಮ್, ಉಪಾಧ್ಯಕ್ಷೆ ಝಮ್ ಝಮ್, ವಿದ್ಯಾರ್ಥಿನಿಯರಾದ ಆಲಿಯಾ ಅಸದಿ, ಅಲಾಸ್, ಆಯಿಷಾ ಮತ್ತು ಅವರ ಪೋಷಕರು ಹಾಜರಿದ್ದರು.

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...