ಕರ್ನಾಟಕ ಬಂದ್ ಗೆ ಉಡುಪಿ, ದಕ್ಷಿಣಕನ್ನಡದಲ್ಲೂ ಬೆಂಬಲ ಘೋಷಣೆ

Source: SO News | By Laxmi Tanaya | Published on 27th September 2020, 10:51 AM | Coastal News | Don't Miss |

ಉಡುಪಿ : ರೈತ ವಿರೋಧಿ ಭೂಸುಧಾರಣಾ ಕಾಯ್ದೆ  ಎಪಿಎಂಸಿ ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆ, ವಿದ್ಯುತ್ ಕಾಯ್ದೆ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಸೆ. 28 ರಂದು ನಡೆಸುತ್ತಿರುವ ಕರ್ನಾಟಕ ಬಂದ್ ಗೆ ಉಡುಪಿಯಲ್ಲಿ 14 ಸಂಘಟನೆಗಳು ಬೆಂಬಲ ಘೋಷಿಸಿವೆ.

ಕಾಂಗ್ರೆಸ್ ಕಿಶಾನ್ ಘಟಕ, ಕೆಪಿಆರ್ಎಸ್, ಕಾಂಗ್ರೆಸ್, ಜೆಡಿಎಸ್, ದಲಿತ ಸಂಘರ್ಷ ಸಮಿತಿ, ಸಿಪಿಐಎಂ, ಕರಾದಸಂಸ, ಸಹಬಾಳ್ವೆ ಉಡುಪಿ, ವೆಲ್ಪೇರ್ ಪಾರ್ಟಿ ಆಫ್ ಕರ್ನಾಟಕ, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ, ಕರ್ನಾಟಕ ರಾಷ್ಟ್ರ ಸಮಿತಿ, ಭಾರತೀಯ ಕ್ರಿಶ್ಚಿಯನ್ ಒಕ್ಕೂಟ, ಅಂಬೇಡ್ಕರ್ ಸೇನೆ ಸಂಘಟನೆಗಳು ಬೆಂಬಲಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ರಸ್ತೆ ತಡೆ ಪ್ರತಿಭಟನೆ:
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಕರೆದ ಸಂದಾನ ಸಭೆ ವಿಫಲವಾದ  ಹಿನ್ನೆಲೆಯಲ್ಲಿ ಸೆಪ್ಟೆಂಬರ್ 28 ರಂದು ಕರೆ ನೀಡಿದ ಬಂದ್ ಗೆ ದಕ್ಷಿಣಕನ್ನಡ ಜಿಲ್ಲೆಯಲ್ಲೂ ರಸ್ತೆ ತಡೆ, ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳು ನಿರ್ಧರಿಸಿವೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...