ಉಡುಪಿ: ಜಿಲ್ಲೆಯ ಎಲ್ಲ ಗಡಿಗಳನ್ನೂ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದ್ದು, ಜಿಲ್ಲೆಯೊಳಗೆ ಯಾರಿಗೂ ಪ್ರವೇಶವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.
ಜಿಲ್ಲೆಯಿಂದ ಯಾರೂ ಹೊರಹೋಗುವಂತಿಲ್ಲ. ಲಾಕ್ ಡೌನ್ ಮುಗಿಯುವ ದಿನ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ನಾಲ್ಕೂ ಗಡಿಯನ್ನು ಸಂಪೂರ್ಣ ಸೀಲ್ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಗಡಿಗಳು ಇದರಲ್ಲಿ ಸೇರಿವೆ ಎಂದು ಅವರು ತಿಳಿಸಿದ್ದಾರೆ.
ಹೊರ ಜಿಲ್ಲೆ ಗಳಲ್ಲಿರುವ ಜಿಲ್ಲೆಯ ಜನರು ಉಡುಪಿಗೆ ಬರಲು ತಯಾರಿ ನಡೆಸಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಹಾಗೆಯೇ ಉಡುಪಿಯಲ್ಲಿ ಸಿಲುಕಿರುವ ಹೊರ ಜಿಲ್ಲೆಯ ಜನರು ಹೊರಡಲು ಸಿದ್ಧತೆ ಮಾಡಿಕೊಳ್ಳುತ್ತಿರುವುದರಿಂದ ಗಡಿಗಳನ್ನು ಸೀಲ್ ಮಾಡಲಾಗಿದೆ.