ಕಾರವಾರ: 16.41 ಲಕ್ಷ ಮತದಾರರು: 1977 ಮತಗಟ್ಟೆಗಳು: 6939 ಸಿಬ್ಬಂದಿಗಳು; ಲೋಕಸಭಾ ಚುನಾವಣೆಗೆ ನಾವ್ ರೆಡಿ ಎಂದ ಜಿಲ್ಲಾಡಳಿತ

Source: S O News | By I.G. Bhatkali | Published on 5th May 2024, 6:15 PM | Coastal News |

ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬAಧಿಸಿದAತೆ, ಮುಕ್ತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆಗಾಗಿ ಜಿಲ್ಲೆಯಲ್ಲಿ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ಮೇ 7 ರಂದು ನಡೆಯುವ ಮತದಾನದಲ್ಲಿ ಜಿಲ್ಲೆಯ ಎಲ್ಲಾ ಜನತೇ ತಪ್ಪದೇ ಮತಗಟ್ಟೆಗಳಿಗೆ ಬಂದು ತಮ್ಮ ಮತ ಚಲಾಯಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.

 ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 1977 ಮತಗಟ್ಟೆಗಳಲ್ಲಿ ಸುಗಮ ಚುನಾವಣಾ ಕರ್ತವ್ಯಕ್ಕಾಗಿ 6939 ಮತಗಟ್ಟೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಿದ್ದು, ಇವರಿಗೆ ಈಗಾಗಲೇ 2 ಹಂತದ ತರಬೇತಿಯನ್ನು ನೀಡಿ, ಚುನಾವಣಾ ಕರ್ತವ್ಯಕ್ಕೆ ಸಂಪೂರ್ಣವಾಗಿ ಸಜ್ಜುಗೊಳಿಸಲಾಗಿದೆ. ಲೋಕಸಭಾ ವ್ಯಾಪ್ತಿಯಲ್ಲಿ 8,23,604 ಪುರುಷ, 8,17,536 ಮಹಿಳಾ ಮತ್ತು 16 ಮಂದಿ ಇತರೆ ಮತದಾರರು ಸೇರಿದಂತೆ ಒಟ್ಟು 16,41,156 ಮತದಾರರಿದ್ದು, ಪ್ರತೀ ಮನೆಗಳಿಗೆ ವೋಟರ್ ಸ್ಲಿಪ್ ಗಳನ್ನು ವಿತರಿಸಲಾಗಿದೆ. ಮತದಾರರು ತಮ್ಮ ಎಪಿಕ್ ಕಾರ್ಡ್ ಅಲ್ಲದೇ ಚುನಾವಣಾ ಆಯೋಗ ಸೂಚಿಸಿರುವ ಪರ್ಯಾಯ ಗುರುತಿನ ದಾಖಲೆಗಳನ್ನು ತೋರಿಸಿ ಮತದಾನ ಮಾಡಬಹುದು ಎಂದರು.

ಅಲ್ಲದೇ ಒಟ್ಟು 1015 ಮತಗಟ್ಟೆಗಳಲ್ಲಿ ವೆಬ್ ಕ್ಯಾಸ್ಟಿಂಗ್ ಆಯೋಜಿಸಲಾಗಿದ್ದು, 303 ಮೈಕ್ರೋ ಅಬ್ರ‍್ವರ್, 21 ಮಂದಿ ವಿಡಿಯೋಗ್ರಾಫರ್ ಗಳು ಹಾಗೂ 200 ಸೆಕ್ಟರ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಎಲ್ಲಾ ಮತಗಟ್ಟೆಗಳಲ್ಲಿ ಮತದಾರರಿಗೆ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆಯನ್ನು ಮಾಡಿದ್ದು, ಹಿರಿಯ ನಾಗರೀಕರಿಗೆ ಮತ್ತು ವಿಕಲಚೇತನರಿಗೆ ವೀಲ್ ಚೇರ್ ವ್ಯವಸ್ಥೆ ಮತ್ತು ರ‍್ಯಾಂಪ್ ವ್ಯವಸ್ಥೆ ಮಾಡಲಾಗಿದೆ ಎಂದರು.

 ಚುನಾವಣಾ ಸಿಬ್ಬಂದಿಗಳಿಗಾಗಿ ದೈನಂದಿನ ಉಪಯೋಗಕ್ಕೆ ಅಗತ್ಯವಿರುವ ಕಿಟ್ ಜೊತೆಗೆ ಅವರ ಆರೋಗ್ಯ ಕಾಪಾಡಿಕೊಳ್ಳುವ ಉದ್ದೇಶದಿಂದ ತುರ್ತು ಬಳಕೆಗೆ ಅಗತ್ಯವಿರುವ ಔಷಧದ ಕಿಟ್‌ನ್ನು ಕೂಡಾ ನೀಡಲಾಗುತ್ತಿದೆ. ಮಹಿಳಾ ಮತಗಟ್ಟೆ , ವಿಶೇಷ ಚೇತನ ಮತಗಟ್ಟೆ ಮತ್ತು ಯುವ ಮತಗಟೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ವಿಶೇಷ ರೀತಿಯ ಸಮವಸ್ತçಗಳನ್ನು ನೀಡಲಾಗುತ್ತಿದೆ ಎಂದರು.

ವಿವಿಧ ರೀತಿಯ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಸುವಿಧಾ ಮೂಲಕ 283 ಅನುಮತಿಗಳನ್ನು ನೀಡಿದ್ದು, ಉಚಿತ ಸಹಾಯವಾಣಿ ಸಂ.1950 ಗೆ ಇದುವರೆಗೆ ಸಲ್ಲಿಕೆಯಾಗಿರುವ 439 ಕರೆಗಳು ಮತ್ತು ಎನ್.ಜಿ.ಎಸ್.ಪಿ ಮೂಲಕ ಸಲ್ಲಿಕೆಯಾಗಿದ್ದ 265 ದೂರುಗಳು ಹಾಗೂ ಸೀವಿಜಿಲ್ ಮೂಲಕ ಸಲ್ಲಿಕೆಯಾಗಿದ್ದ 1176 ದೂರುಗಳನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸಲಾಗಿದೆ. ನೀತಿ ಸಂಹಿತೆ ಆರಂಭವಾದಾಗಿನಿAದ ಇದುವರೆಗೆ 1,13,876.,655 ಲೀ ಮದ್ಯವನ್ನು ವಶಪಡಿಸಿಕೊಂಡಿದ್ದು ಇದರ ಮೌಲ್ಯ ರೂ.2,52,41,188 ಮತ್ತು 3.827 ಕೆಜಿ ಮಾದಕವಸ್ತು ವಶಪಡಿಸಿಕೊಂಡಿದ್ದು ಇದರ ಮೌಲ್ಯ ರೂ. 68,500 ಅಲ್ಲದೇ 84,87,847 ರೂ ಮೌಲ್ಯದ ಚಿನ್ನ ಮತ್ತು ಬೆಳ್ಳಿ, ಹಾಗೂ ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿ36,93,300 ರೂ ವಶಪಡಿಸಿಕೊಳ್ಳಲಾಗಿದೆ ಎಂದರು.

ವಿವಿಧ ಕಾರಣಗಳಿಂದ ಮತದಾನ ಕುರಿತು ಬಹಿಷ್ಕಾರ ಹಾಕಿದ್ದ ಸಾರ್ವಜನಿಕರನ್ನು ಮತದಾನ ಮಾಡುವಂತೆ ಮನವೊಲಿಸಲಾಗಿದೆ. ಮನೆಯಿಂದಲೇ ಮತದಾನ ಮಾಡುವ ಕಾರ್ಯಕ್ರಮದಲ್ಲಿ ಶೇ.95 ರಷ್ಟು ಸಾಧನೆ ಆಗಿದ್ದು, ಅರ್ಹ 5023 ಮತದಾರಲ್ಲಿ 4819 ಮಂದಿ ಮತದಾನ ಮಾಡಿದ್ದು, 64 ಮಂದಿ ಮೃತಪಟ್ಟಿದ್ದು, 140 ಮಂದಿ ಮನೆಯಲ್ಲಿ ಇಲ್ಲದೇ ಮತದಾನಕ್ಕೆ ಗೈರು ಆಗಿದ್ದಾರೆ ಎಂದರು.

ಜಿಲ್ಲೆಯಲ್ಲಿನ 85 ವರ್ಷ ಮೇಲ್ಪಟ್ಟವರು ಮತ್ತು ವಿಕಲಚೇನರಿಗೆ ಮತಗಟ್ಟೆಗಳಿಗೆ ಬರಲು ಅನುಕೂಲವಾಗುವಂತೆ ಉಚಿತ ವಾಹನ ವ್ಯವಸ್ಥೆ ಮಾಡಿದ್ದು, ಈ ಸೌಲಭ್ಯಕ್ಕಾಗಿ ಈಗಾಗಲೇ 686 ವಿಕಲಚೇತನರು ಮತ್ತು 238 ಹಿರಿಯ ನಾಗರೀಕರು ತಮ್ಮ ಹೆಸರು ನೊಂದಣಿ ಮಾಡಿಕೊಂಡಿದ್ದಾರೆ ಎಂದರು.

ಚುನಾವಣೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗೃತವಾಗಿ ಮೇ 5ರ ಸಂಜೆ 5 ಗಂಟೆಯಿAದ ಮೇ 7ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ನಿಷೇಧಿಸಿ ಹಾಗೂ ಮತದಾನ ದಿನ ಮೇ 7 ರಂದು ‘ಡ್ರೆöÊ ಡೇ’ ಎಂದು ಈಗಾಗಲೇ ಆದೇಶಿಸಲಾಗಿದೆ ಮತ್ತು ಮೇ 5 ರಂದು ಸಂಜೆ 6 ಗಂಟೆಯಿAದ ಮೇ 7ರ ಮತದಾನ ಮುಕ್ತಾಯವಾಗುವವರೆಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರದ ಮತದಾನ ನಡೆಯುವ ಮತಗಟ್ಟೆಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಸುತ್ತ ಸಿ.ಆರ್.ಪಿ.ಸಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದರು.

ಸ್ವೀಪ್ ಕಾರ್ಯಕ್ರಮಗಳ ಮೂಲಕ ಜಿಲ್ಲೆಯಲ್ಲಿ ಮತದಾನದ ಕುರಿತಂತೆ ವ್ಯಾಪಕವಾಗಿ ಜಾಗೃತಿ ಮೂಡಿಸಿದ್ದು, ಜಿಲ್ಲೆಯಿಂದ ಹೊರಗಿರುವ ಮತದಾರಿಗೆ ಮೇ 7 ರಂದು ಮತದಾನ ಮಾಡಲು ಜಿಲ್ಲೆಗೆ ಆಗಮಿಸುವಂತೆ ಕೋರಿ ಪತ್ರ ಬರೆಯಲಾಗುತ್ತಿದೆ. ಈ ಬಾರಿ ಜಿಲ್ಲೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಮತದಾನವಾಗುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಮತದಾರರು ತಪ್ಪದೇ ಮತ ಚಲಾಯಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಸಹಾಯಕ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಉಪಸ್ಥಿತರಿದ್ದರು.
 

Read These Next

ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರಾಸಾಯನಿಕ ಬಳಕೆ ಕುರಿತು ವ್ಯಾಪಕವಾಗಿ ಪರಿಶೀಲಿಸಿ : ಜಿಲ್ಲಾಧಿಕಾರಿ

ಕಾರವಾರ :ಜಿಲ್ಲೆಯಲ್ಲಿನ ಆಹಾರ ತಯಾರಿಕಾ ಘಟಕಗಳು, ಬೀದಿ ಬದಿ ವ್ಯಾಪಾರಿಗಳು ತಯಾರಿಸುವ ಆಹಾರ ಪದಾರ್ಥಗಳಲ್ಲಿ ಸಾರ್ವಜನಿಕರ ಆರೋಗ್ಯದ ...

ಮಳೆಗಾಲದಲ್ಲಿ ಮುನ್ನೆಚ್ಚರಿಕೆ; ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಸೂಚನೆ

ಮಳೆಗಾಲದಲ್ಲಿ ಕಂಡು ಬರಬಹುದಾದ ಡೆಂಗಿ, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ...

ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಬಂದರೂ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಭಟ್ಕಳ ತಾಲೂಕು

ನೀರಿನ ಸಮಸ್ಯೆಯಿಂದಾಗಿ ಭಟ್ಕಳದ ನಗರ ಮತ್ತು ಗ್ರಾಮೀಣ ಪ್ರದೇಶಗಳ ನಿವಾಸಿಗಳು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ನೀರಿಗಾಗಿ ಸರತಿ ...