ಜಿ.ಪಂ. ಸಿಇಒ ಆದೇಶದ ಮೇರೆಗೆ ಮುರುಡೇಶ್ವರದ ಅನಧಿಕೃತ ಗೂಡಂಗಡಿ ತೆರವು

Source: sonews | By Staff Correspondent | Published on 19th September 2019, 11:13 PM | Coastal News | Don't Miss |

ಭಟ್ಕಳ: ಜಿಲ್ಲಾ ಕಾರ್ಯನಿರ್ವಹಣಾಧಿಕಾರಿಗಳ ಆದೇಶದ ಮೇರೆಗೆ ಗುರುವಾರದಂದು ಮುರ್ಡೇಶ್ವರದಲ್ಲಿರುವ ಅನಧಿಕೃತ ಗೂಡಾಂಗಡಿ ತೆರವುಗೊಳಿಸಲು ಸ್ಥಳಕ್ಕೆ ತೆರಳಿದ ಕಂದಾಯ ಅಧಿಕಾರಿಗಳು ವ್ಯಾಪಾರಿಗಳ ವಿರೋಧದ ನಡುವೆ ತಹಶೀಲ್ದಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅಂಗಡಿಗಳನ್ನು ತೆರವುಗೊಳಿಸಲಾಯಿತು.

ಮುರ್ಡೇಶ್ವರದ ಪುಷ್ಕರಣಿಯ 396/ ಸರ್ವೇ ನಂಬರ ಭಾಗದಲ್ಲಿನ ಅನಧಿಕೃತ ಗೂಡಂಗಡಿ ತೆರವು ಮಾಡಲು ಕಂದಾಯ ಇಲಾಖಾಧಿಕಾರಿಗಳು ಸೂಚನೆ ನೀಡಿದ್ದರು ತೆರವುಗೊಳಿಸದೆ ಇದ್ದರಿಂದ ಇಂದು ಸುಮಾರು ಪೊಲೀಸ ಬಿಗಿ ಬಂದೋಬಸ್ತ್ ಮೂಲಕ ತೆರವುಗೊಳಿಸಿ ಗೂಡಂಗಡಿಕಾರರು

ಕೆಲ ಸಮಯ ಗೊಂದಲಮಯ ವಾತಾವರಣ ಏರ್ಪಡಿಸಿ 1981ರಿಂದಲೂ ಕಂದಾಯ ಇಲಾಖೆಗೆ ನಾವು ದಂಡ ಕಟ್ಟಿಕೊಂಡು ಸಣ್ಣ ಪುಟ್ಟ ಅಂಗಡಿ ಮುಂಗಟ್ಟು ನಡೆಸಿಕೊಂಡು ಜೀವನ ಸಾಗಿಸುತ್ತಾ ಬಂದಿರುತ್ತೇವೆ, ನಮಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಿ ನಾವೆ ಖುದ್ದಾಗಿ ಅಂಗಡಿಗಳನ್ನು ಸ್ಥಳಾಂತರ ಪಡಿಸುತ್ತೇವೆ. 25 ರಿಂದ 30 ವರ್ಷಗಳ ಹಿಂದಿನಿಂದ ಅಂಗಡಿಗಳಿಂದ ಜೀವನ ನಿರ್ವಹಿಸುತ್ತಾ ಬಂದಿದ್ದೇವೆ, ರಸ್ತೆ ಅಗಲೀಕರಣಕ್ಕೆ ಎಷ್ಟೂ ಜಾಗದ ಅವಶ್ಯಕತೆ ಇದೆಯೋ ಅಷ್ಟನ್ನೂ ಬಿಟ್ಟುಕೊಡುತ್ತೇವೆ. ಎಂದು ಪಟ್ಟು ಹಿಡಿದರು.

 

ಸಮಯದಲ್ಲಿ ಅಂಗಡಿಕಾರರನ್ನು ಉದ್ದೇಶಿಸಿ ಮಾತನಾಡಿದ ತಹಶೀಲ್ದಾರ್ ವಿ.ಪಿ. ಕೊಟ್ರಳ್ಳಿ ಇದು ಕಂದಾಯ ಇಲಾಖೆಯ ಆಸ್ತಿಯಾಗಿದ್ದು, ರಸ್ತೆಗೆ ಅನುಕೂಲ ಮಾಡಿಕೊಳ್ಳುವ ಉದ್ದೇಶದಿಂದ ತೆರವುಗೊಳಿಸಲು ಮಾನ್ಯ ಸಹಾಯಕ ಆಯುಕ್ತರು ಭಟ್ಕಳ , ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಕಾರವಾರ, ಈಗಾಗಲೇ ಸಭೆಗಳನ್ನು ನಡೆಸಿ ತೀರ್ಮಾನ ಕೈಗೊಂಡು ಮುರ್ಡೇಶ್ವರ ಗ್ರಾಮದ ಅಂದವನ್ನು ಹೆಚ್ಚಿಸುವ ಉದ್ದೇಶಕ್ಕಾಗಿ ಸರಕಾರದ ಆಸ್ತಿಯನ್ನು ಅತಿಕೃಮಣ ಮಾಡಿದ ಗೂಡಂಗಡಿಗಳನ್ನು ನ್ಯಾಯಾಲಯದ ಆದೇಶಕ್ಕೆ ಯಾವುದೇ ತೊಡಕಾಗದೆ ಹಂತ ಹಂತವಾಗಿ ಎಲ್ಲಾ ಅನಧಿಕೃತ ಜಾಗಗಳನ್ನು ತೆರವುಗೊಳಿಸುತ್ತೇವೆ ಎಂದರು.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...