ಮದುವೆಗೆ ಒಪ್ಪದ ಪೋಷಕರು, ಕ್ರಿಮಿನಾಶಕ ಸೇವಿಸಿ ಪ್ರೇಮಿಗಳ ಆತ್ಮಹತ್ಯೆ…!

Source: so news | By MV Bhatkal | Published on 23rd June 2019, 6:04 PM | State News | Don't Miss |

ಕೊಳ್ಳೇಗಾಲ:ಪ್ರೀತಿಸುತ್ತಿದ್ದ ಯುವತಿಯೊಂದಿಗೆ ಫೋಷಕರು ಮದುವೆ ಮಾಡಲು ಒಪ್ಪದ ಕಾರಣ ಪ್ರೇಯಸಿಯೊಂದಿಗೆ ಪ್ರಿಯಕರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಉಗನಿಯ ಗ್ರಾಮದ ಕಿರಣ್ (23) ಹಾಗೂ ಸಂಗೀತಾ (17) ಆತ್ಮಹತ್ಯೆ ಮಾಡಿಕೊಂಡ ಯುವ ಪ್ರೇಮಿಗಳು.
ಪಟ್ಟಣದ ಎಸ್‍ವಿಕೆ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಸಂಗೀತಾಳನ್ನು ಕಿರಣ್ ಕಳೆದ ಒಂದು ವರ್ಷದಿಂದ ಪ್ರೀತಿಸುತ್ತಿದ್ದ. ಈ ವಿಚಾರ ಎರಡು ಮನೆಯವರಿಗೂ ತಿಳಿದಿತ್ತು. ಇವರಿಬ್ಬರು ಮದುವೆಯಾಗುವ ನಿರ್ಧಾರ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಕಿರಣ್ ಕಳೆದ 4 ದಿನಗಳ ಹಿಂದೆ ತನ್ನ ತಂದೆ ನಾಗರಾಜುರನ್ನು ತಾನು ಪ್ರೀತಿಸುತ್ತಿರುವ ಎದುರು ಮನೆಯ ಸಂಗೀತಳನ್ನು ಮದುವೆ ಮಾಡಿಕೊಡುವಂತೆ ಒತ್ತಾಯಿಸಿದ್ದಾನೆ. ಸಂಗೀತಾ ಇನ್ನೂ ಅಪ್ರಾಪ್ತಳಾಗಿರುವುದರಿಂದ ತಂದೆ ನಾಗ ರಾಜು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಪ್ರೇಮದ ಅಮಲಿನಲ್ಲಿದ್ದ ಕಿರಣ್ ಕುಪಿತಗೊಂಡು ಮದುವೆ ಮಾಡಿ ಕೊಡದಿದ್ದರೆ ನನ್ನ ಹೆಣವನ್ನು ಗವಿವರದರಾಜಸ್ವಾಮಿ ಬೆಟ್ಟದಲ್ಲಿ ನೋಡಬೇಕಾಗುತ್ತದೆ ಎಂದು ಬೆದರಿಕೆ ಹಾಕಿ ಹೊರ ನಡೆದಿದ್ದಾನೆ. ಹೋಗುವಾಗ ಮನೆಯಿಂದ 30 ಸಾವಿರ ರೂ.ಹಣವನ್ನು ತೆಗೆದುಕೊಂಡು ಪ್ರೇಯಸಿ ಸಂಗೀತಳನ್ನು ಕರೆದುಕೊಂಡು ಹೋಗಿದ್ದಾನೆ.
ಮನೆ ಬಿಟ್ಟ ಪ್ರೇಮಿಗಳಿಬ್ಬರು ಕೊಳ್ಳೇಗಾಲ ಪಟ್ಟಣಕ್ಕೆ ತೆರಳಿ ಊಟ ಹಾಗೂ (ಎಕಲೆಕ್ಸï) ಕ್ರಿಮಿನಾಶಕವನ್ನು ತೆಗೆದು ಕೊಂಡು ಸತ್ತೇಗಾಲದ ಜಗೇರಿ ಸಮೀಪದ ಗವಿವರದರಾಜಸ್ವಾಮಿ ಬೆಟ್ಟ ಸೇರಿದ್ದಾರೆ. ಬೆಟ್ಟದ ಹನುಮಂತನ ಹಳ್ಳದ ಬಳಿ ತಾವು ತಂದಿದ್ದ ಊಟ (ಅನ್ನ) ಕ್ಕೆ ಕ್ರಿಮಿನಾಶಕ (ಎಕಲೆಕ್ಸï) ವನ್ನು ಬೆರೆಸಿ ತಿಂದು ಹಲ್ಲೆ ಹರಿಯುತ್ತಿದ್ದ ಹಳ್ಳದ ನೀರಿಗೆ ಬಿದ್ದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.
ಈ ಸಂಬಂದ ಇಲ್ಲಿನ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...