ಕೊರೋನ ವೈರಸ್‍ಗೆ ಉತ್ತರಪ್ರದೇಶದ ಸಂಪುಟ ಸಚಿವೆ ಕಮಲ್‍ರಾಣಿ ಬಲಿ

Source: PTI | Published on 3rd August 2020, 12:28 AM | National News | Don't Miss |

 

ಲಕ್ನೊ: ಕೆಲವು ದಿನಗಳ ಹಿಂದೆ ನೊವೆಲ್ ಕೊರೋನ ವೈರಸ್ ಸೋಂಕು ತಗಲಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉತ್ತರಪ್ರದೇಶ ಸರಕಾರದ ಸಂಪುಟ ಸಚಿವೆ ಕಮಲ್‍ರಾಣಿ ಅರುಣ್ ರವಿವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು.
ಕಮಲ್‍ರಾಣಿ ದೇವಿ ಅವರು ಸಂಜಯ ಗಾಂಧಿ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಲ್ಲಿ ಬೆಳಗ್ಗೆ 9:30ಕ್ಕೆ ನಿಧನರಾಗಿದ್ದಾರೆ. ಕಮಲ್‍ರಾಣಿ ಕಳೆದ ಕೆಲವು ದಿನಗಳಿಂದ ಆಮ್ಲಜನಕ ಹಾಗೂ ಕೃತಕ ಉಸಿರಾಟದ ವ್ಯವಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಸರಕಾರದ ಮೂಲಗಳು ತಿಳಿಸಿವೆ.
ಕಮಲ್‍ರಾಣಿ ಅವರು ಆದಿತ್ಯನಾಥ ನೇತೃತ್ವದ ಸರಕಾರದಲ್ಲಿ ತಾಂತ್ರಿಕ ಶಿಕ್ಷಣ ಸಚಿವೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಕಮಲ್‍ರಾಣಿ ಗೆ ಜುಲೈ 18ರಂದು ಕೊರೋನ ವೈರಸ್ ಸೋಂಕು ದೃಢಪಟ್ಟ ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದರು.
ಕಮಲ್‍ರಾಣಿ ನಿಧನದ ಹಿನ್ನೆಲೆಯಲ್ಲಿ ಸಿಎಂ ಆದಿತ್ಯನಾಥ್ ತಮ್ಮ ಅಯೋಧ್ಯೆ ಪ್ರವಾಸವನ್ನು ರದ್ದುಪಡಿಸಿದ್ದಾರೆ. ಆದಿತ್ಯನಾಥ್ ಅಯೋಧ್ಯೆಯ ರಾಮ ಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ ತಯಾರಿ ನೋಡಲು ಅಯೋಧ್ಯೆಗೆ ತೆರಳಬೇಕಾಗಿತ್ತು

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...