ದಲಿತ ಮಹಿಳೆಯ ಸಾಮೂಹಿಕ ಅತ್ಯಾಚಾರಗೈದು ಹತ್ಯೆ; ಉತ್ತರಪ್ರದೇಶದಲ್ಲಿ ನಡೆದ ಭೀಕರ ಕೃತ್ಯ

Source: Vb | By I.G. Bhatkali | Published on 4th November 2023, 9:38 AM | National News |

ಬಂದಾ: ದಲಿತ ಮಹಿಳೆಯೋರ್ವರ ಸಾಮೂಹಿಕ ಅತ್ಯಾಚಾರ ಎಸಗಿದ, ಹತ್ಯೆಗೈದ ಹಾಗೂ ಮೃತದೇಹವನ್ನು ತುಂಡುಗಳಾಗಿ ಕತ್ತರಿಸಿದ ಭೀಕರ ಘಟನೆ ಉತ್ತರಪ್ರದೇಶದ ಬಂದಾ ಜಿಲ್ಲೆಯ ಪಾಟೌರ ಗ್ರಾಮದಲ್ಲಿ ಈ ವಾರದ ಆರಂಭದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

40 ವರ್ಷದ ದಲಿತ ಮಹಿಳೆ ಹಿಟ್ಟಿನ ಗಿರಣಿ ಸ್ವಚ್ಛಗೊಳಿಸಲು ರಾಜ್‌ಕುಮಾರ್ ಶುಕ್ಲಾ ಅವರ ಮನೆಗೆ ತೆರಳಿದ್ದರು. ಈ ಸಂದರ್ಭ ತನ್ನ ತಾಯಿಯನ್ನು ಕರೆಯಲು ಅವರ 20 ವರ್ಷದ ಮಗಳು ಅಲ್ಲಿಗೆ ತಲುಪಿದಾಗ, ಬಾಗಿಲಿಗೆ ಚಿಲಕ ಹಾಕಲಾದ ಕೊಠಡಿಯ ಒಳಗಡೆಯಿಂದ ತಾಯಿ ಕಿರುಚುತ್ತಿರುವುದು ಕೇಳುತ್ತಿತ್ತು. ಕೊಠಡಿಯ ಬಾಗಿಲು ತೆರೆದಾಗ ತಾಯಿಯ ದೇಹ ಮೂರು ತುಂಡುಗಳಾಗಿ ಬಿದ್ದಿರುವುದು ಕಂಡುಬಂತು ಎಂದು ಗಿರ್ವಾನ್ ಪೊಲೀಸ್ ಠಾಣೆಯ ಎಸ್ ಎಚ್‌ಒ ಸಂದೀಪ್ ತಿವಾರಿ ಹೇಳಿದ್ದಾರೆ. ಆಕೆ ಪೊಲೀಸರಿಗೆ ಮಾಹಿತಿ ನೀಡಿದಳು. ಈ ಹಿನ್ನೆಲೆಯಲ್ಲಿ ರಾಜ್‌ಕುಮಾರ್, ಆತನ ಸಹೋದರರಾದ ಬಾವುವಾ ಶುಕ್ಲಾ ಹಾಗೂ ರಾಮಕೃಷ್ಣ ಶುಕ್ಲಾ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳು ತನ್ನ ತಾಯಿಯನ್ನು ಸಾಮೂಹಿಕ ಅತ್ಯಾಚಾರ ಎಸಗಿ, ಭೀಕರವಾಗಿ ಹತ್ಯೆಗೈದಿದ್ದಾರೆ ಎಂದು ಆಕೆ ಹೇಳಿದ್ದಾಳೆ.

ಈ ನಡುವೆ ಸಮಾಜವಾದಿ ಪಕ್ಷದ ವರಿಷ್ಠ ಅಖಿಲೇಶ್ ಯಾದವ್ ಘಟನೆ ಕುರಿತಂತೆ ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅವರು 'ಎಕ್ಸ್' ನಲ್ಲಿ ಮಾಡಿದ ಹಿಂದಿ ಪೋಸ್ಟ್ ನಲ್ಲಿ “ಬಂದಾದ ದಲಿತ ಮಹಿಳೆಯ ಅತ್ಯಾಚಾರ ಹಾಗೂ ಹತ್ಯೆ ಹೃದಯ ವಿದ್ರಾವಕವಾದ ಸುದ್ದಿ. ಉತ್ತರಪ್ರದೇಶದ ಮಹಿಳೆಯರು ಭೀತರಾಗಿದ್ದಾರೆ ಹಾಗೂ ಆಕ್ರೋಶಿತರಾಗಿದ್ದಾರೆ' ಎಂದಿದ್ದಾರೆ. ಐಐಟಿ-ಬಿಎಚ್‌ಯುನಲ್ಲಿ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿದ ಹಾಗೂ ವೀಡಿಯೊ ದಾಖಲಿಸಿದ ಘಟನೆಯನ್ನು ಕೂಡ ಯಾದವ್ ಅವರು ಉಲ್ಲೇಖಿಸಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...