ರಣಜಿ ಟ್ರೋಫಿ ಇತಿಹಾಸದ ಗರಿಷ್ಠ ವಿಕೆಟ್ ದಾಖಲೆ ವೀರ ರಾಜಿಂದರ್​ ಗೋಯೆಲ್​ ಇನ್ನಿಲ್ಲ

Source: UNI | By MV Bhatkal | Published on 22nd June 2020, 4:17 PM | National News | Sports News | Don't Miss |

ನವದೆಹಲಿ: ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ನಿರ್ವಹಣೆ ತೋರಿದರೂ ಎಂದೂ ಭಾರತ ತಂಡದ ಪರ ಆಡುವ ಅದೃಷ್ಟ ಪಡೆಯದ ಮಾಜಿ ಎಡಗೈ ಸ್ಪಿನ್ನರ್ ರಾಜಿಂದರ್ ಗೋಯೆಲ್ (77 ವರ್ಷ) ಭಾನುವಾರ ರೋಹ್ಟಕ್‌ನಲ್ಲಿ ನಿಧನ ಹೊಂದಿದರು. ರಣಜಿ ಟ್ರೋಫಿ ಇತಿಹಾಸದಲ್ಲಿ ಸರ್ವಾಧಿಕ 637 ವಿಕೆಟ್ ಕಬಳಿಸಿದ ಬೌಲರ್ ಎಂಬ ದಾಖಲೆಯನ್ನು ಈಗಲೂ ತಮ್ಮ ಹೆಸರಿನಲ್ಲಿ ಹೊಂದಿರುವ ರಾಜಿಂದರ್, 44ನೇ ವಯಸ್ಸಿನವರೆಗೂ ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದರು. ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಅವರು ಪತ್ನಿ ಮತ್ತು ಪುತ್ರ, ಮಾಜಿ ಪ್ರಥಮ ದರ್ಜೆ ಕ್ರಿಕೆಟಿಗ ಹಾಗೂ ಹಾಲಿ ದೇಶೀಯ ಮ್ಯಾಚ್ ರೆಫ್ರಿ ನಿತಿನ್ ಗೋಯೆಲ್‌ರನ್ನು ಅಗಲಿದ್ದಾರೆ.
ಹರಿಯಾಣ, ಪಂಜಾಬ್, ದೆಹಲಿ ಪರ ರಣಜಿ ಆಡಿದ್ದ ರಾಜಿಂದರ್ ಒಟ್ಟು 157 ಪ್ರಥಮ ದರ್ಜೆ ಪಂದ್ಯಗಳಲ್ಲಿ 750 ವಿಕೆಟ್ ಕಬಳಿಸಿದ್ದಾರೆ. 59 ಬಾರಿ 5 ವಿಕೆಟ್ ಗೊಂಚಲು ಪಡೆದಿದ್ದರು. ಸ್ಪಿನ್ ದಿಗ್ಗಜರಾದ ಬಿಷನ್ ಸಿಂಗ್ ಬೇಡಿ, ಬಿಎಸ್ ಚಂದ್ರಶೇಖರ್, ಎಸ್. ವೆಂಕಟರಾಘವನ್ ಅವರ ಸಮಕಾಲೀನರಾಗಿದ್ದ ಕಾರಣ ರಾಜಿಂದರ್‌ಗೆ ರಾಷ್ಟ್ರೀಯ ತಂಡದ ಪರ ಆಡುವ ಅವಕಾಶ ಒಲಿದು ಬರಲಿಲ್ಲ. 1974-75ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸರಣಿಯ ಬೆಂಗಳೂರು ಟೆಸ್ಟ್‌ಗೆ ಅವರು ಭಾರತ ತಂಡಕ್ಕೆ ಆಯ್ಕೆಯಾಗಿದ್ದರೂ ಆಡುವ ಅವಕಾಶ ಲಭಿಸಿರಲಿಲ್ಲ. 12ನೇ ಆಟಗಾರನಾಗಿ ಉಳಿದುಬಿಟ್ಟಿದ್ದರು. ಬಿಸಿಸಿಐನಿಂದ ಸಿಕೆ ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.
1958-59ರಿಂದ 1984-85ರವರೆಗೆ 26 ದೇಶೀಯ ಕ್ರಿಕೆಟ್ ಋತುವಿನಲ್ಲಿ ಆಡಿದ್ದ ರಾಜಿಂದರ್ ಎಂದೂ ಸಕಾರಾತ್ಮಕ ಗುಣ ಕಳೆದುಕೊಂಡವರಲ್ಲ. ಗಂಟೆಗಟ್ಟಲೆ ಬೌಲಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದರು. 18 ಪಂದ್ಯಗಳಲ್ಲಿ 10 ವಿಕೆಟ್ ಗೊಂಚಲು ಪಡೆದಿದ್ದರು. 1991ರಲ್ಲಿ ಅವರು ಹರಿಯಾಣದ ಆಯ್ಕೆ ಸಮಿತಿ ಅಧ್ಯಕ್ಷರೂ ಆಗಿದ್ದರು. ದಿಗ್ಗಜ ಸುನೀಲ್ ಗಾವಸ್ಕರ್ ಅವರ ಪುಸ್ತಕ ‘ಐಡಾಲ್ಸ್’ನಲ್ಲಿ ರಾಜಿಂದರ್ ಗೋಯೆಲ್ ಅವರನ್ನು ‘ನಗುವಿನ ದಾಳಿಗಾರ’ ಎಂದು ಬಣ್ಣಿಸಲಾಗಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...