ಚುನಾವಣಾ ವೀಕ್ಷಕರಿಂದ ಮತಎಣಿಕೆ ಕೇಂದ್ರಕ್ಕೆ ಭೇಟಿ ಪರಿಶೀಲನೆ

Source: so news | By MV Bhatkal | Published on 30th March 2019, 12:49 AM | State News | Don't Miss |

 

ಹಾಸನ:ಚುನಾವಣಾ ವೀಕ್ಷಕರಾದ ಶಶಿಭೂಷಣ್ ಕುಮಾರ್ ಮತ್ತು ಮಂಜಿತ್ ಸಿಂಗ್ ಬ್ರಾರ್ ಅವರು ಇಂದು ಲೋಕಸಭಾ ಚುನಾವಣೆಯ ಎಣಿಕೆ ಕೇಂದ್ರವಾಗಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಟ್ಟಡಕ್ಕೆ ಭೇಟಿ ನೀಡಿ ಸಿದ್ದತೆಗಳನ್ನು ಪರಿಶೀಲಿಸಿದರು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎ.ಎನ್. ಪ್ರಕಾಶ್‍ಗೌಡ, ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಎಂ.ಎಲ್ ವೈಶಾಲಿ ಅವರೊಂದಿಗೆ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದ ವೀಕ್ಷಕರು ಭದ್ರತಾ ಕೊಠಡಿಗಳು ವಿಧಾನಸಭಾ ಕ್ಷೇತ್ರವಾರು ಮತಎಣಿಕೆಗೆ ಗುರುತಿಸಲಾಗಿರುವ ಕೊಠಡಿಗಳನ್ನು ಪರಿಶೀಲಿಸಿದರು.
ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಮತಎಣಿಕೆಗೆ ಮಾಡಿಕೊಂಡಿರುವ ಪ್ರಾಥಮಿಕ ಹಂತದ ಸಿದ್ದತೆಗಳು, ಸಿಬ್ಬಂದಿ ನಿಯೋಜನೆ, ಪಾರ್ಕಿಂಗ್ ವ್ಯವಸ್ಥೆ, ಇ.ವಿ.ಎಂ, ವಿ.ವಿ ಪ್ಯಾಟ್‍ಗಳ ಸುರಕ್ಷತೆಗೆ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...