ಭ್ರಷ್ಟಚಾರ ನಿಗ್ರಹ ದಳದಿಂದ ವಿಚಕ್ಷಣಾ ಜಾಗೃತಿ ಸಪ್ತಾಹ

Source: sonews | By Staff Correspondent | Published on 3rd November 2018, 6:15 PM | Coastal News | Don't Miss |

ಭಟ್ಕಳ: ಭ್ರಷ್ಟಚಾರ ನಿಗ್ರಹ ದಳ ಕಾರವಾರ ವತಿಯಿಂದ ಭಟ್ಕಳದ ವಿವಿಧ ಶಾಲಾ-ಕಾಲೇಜು ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ವಿಚಕ್ಷಣಾ ಜಾಗೃತಿ ಸಪ್ತಾಹ-2018 ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಂದ ಜಾಥಾವನ್ನು ಆಯೋಜಿಸಲಾಗಿತ್ತು. 

ನಗರದ ನ್ಯೂ ಇಂಗ್ಲಿಷ್ ಶಾಲಾ ಮೈದಾನದಿಂದ ಆರಂಭಗೊಂಡ ಮಕ್ಕಳ ಜಾಥಾ ಶಮ್ಸುದ್ದೀನ್ ವೃತ್ತದ ಮೂಲಕ ನ್ಯೂಇಂಗ್ಲಿಷ್ ಸಭಾಂಗಣಕ್ಕೆ ಮುಕ್ತಾಯಗೊಂಡಿತು. ನಂತರ ನಡದ ಸಭಾ ಕಾರ್ಯಕ್ರಮವನ್ನು  ಉದ್ದೇಶಿಸಿ ಮಾತನಾಡಿದ ಭ್ರಷ್ಟಾಚಾರ ನಿಗ್ರಹ ದಳ ಕಾರವಾರದ ಡಿ.ವೈಎಸ್ಪಿ ಗಿರೀಶ್ ಎನ್.ವೈ  ಭ್ರಷ್ಟಾಚಾರ ತೊಲಗಿಸಿ ನವಭಾರತ ಕಟ್ಟೋಣ ಎಂಬ ದ್ಯೇಯವಾಕ್ಯದೊಂದಿಗೆ ಈ ವರ್ಷ ಜಾಗೃತಿ ಸಪ್ತಾಹವನ್ನು ನಡೆಸಲಾಗುತ್ತಿದ್ದು ವಿದ್ಯಾರ್ಥಿಗಳು ತಮ್ಮಲ್ಲಿ ಭ್ರಷ್ಟಾಚಾರ ನಿರ್ಮೂಲನ ಮಾಡುವ ಕುರಿತಂತೆ ಈಗಿಂದಲೆ ಜಾಗೃತಿಯನ್ನುಂಟು ಮಾಡಿಕೊಳ್ಳಬೇಕೆಂದು ಕರೆ ನೀಡಿದರು. ನಂತರ ವಿದ್ಯಾರ್ಥಿಗಳು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. 

ಈ ಸಂದರ್ಭದಲ್ಲಿ ನ್ಯೂ ಇಂಗ್ಲಿಷ್ ಪಿಯು ಕಾಲೇಜ್ ಪ್ರಾಂಶುಪಾಲ ವೀರೇಂದ್ರ ಶಾನುಭಾಗ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್. ಮುಂಜಿ, ಎಸಿಬಿ ಪಿಎಸ್‍ಐ ರಮೇಶ್ ಮತ್ತಿತರರು ಉಪಸ್ಥಿತರಿದ್ದರು. 

Read These Next

ಕುಂದಾಪುರ: ತಾಯಿಯ ಕೊಳೆತ ಮೃತದೇಹದೊಂದಿಗೆ 3 ದಿನ ಕಳೆದ ವಿಕಲಚೇತನ ಮಗಳು – ಆಸ್ಪತ್ರೆಯಲ್ಲಿ ನಿಧನ

ಮನೆಯಲ್ಲೇ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿದ್ದ ತಾಯಿಯ ಮೃತದೇಹದ ಜೊತೆ ಅನ್ನಾಹಾರ ಇಲ್ಲದೇ ಮೂರು ನಾಲ್ಕು ದಿನ ಕಳೆದ 32ರ ಹರೆಯದ ...

ರಸ್ತೆಯಲ್ಲಿ ಕಸ ಎಸೆಯುವುದನ್ನು ತಪ್ಪಿಸಲು ಹೆಬಳೆ ಪಂಚಾಯತ್ ವ್ಯಾಪ್ತಿಯಲ್ಲಿ ಸಿಸಿಟಿವಿ ಕ್ಯಾಮರಾ ಕಣ್ಗಾವಲು

ಸ್ಥಳೀಯ ಜನರ ಸಹಕಾರದಿಂದ ಹನೀಫಾಬಾದ್ ರಸ್ತೆಯಲ್ಲಿ ಮೂರು, ಜಾಮಿಯಾಬಾದ್ ರಸ್ತೆಯಲ್ಲಿ ಮೂರು, ಮಿನಾ ರಸ್ತೆಯಲ್ಲಿ ಒಂದು ಕ್ಯಾಮೆರಾ ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...