ಚಿಂಚೋಳಿಯಲ್ಲಿ ಬೈಕ್ ಜಾಥಾದ ಮೂಲಕ ಮತದಾನದ ಜಾಗೃತಿ

Source: SO News | By Laxmi Tanaya | Published on 25th April 2024, 9:53 PM | State News | Don't Miss |

ಕಲಬುರಗಿ : ಚಿಂಚೋಳಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತ   ವತಿಯಿಂದ ಹಮ್ಮಿಕೊಳ್ಳಲಾದ "ಮತದಾನ ಜಾಗೃತಿ ಜಾಥಾ ಅಭಿಯಾನ" ಕ್ಕೆ  ಚಿಂಚೋಳಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಾದ ಸಂತೋಷ ಇನಾಮದಾರ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಂಕರ ರಾಠೋಡ ಅವರು ಬುಧವಾರ ಚಿಂಚೋಳಿಯಲ್ಲಿ ಚಾಲನೆ ನೀಡಿದರು.

     ಮತದಾನ ಜಾಗೃತಿ ಜಾಥಾ ಅಂಗವಾಗಿ ಹಮ್ಮಿಕೊಳ್ಳಲಾದ ಬೈಕ್ ಜಾಥಾದ ಮೆರವಣಿಗೆಯು ಚಿಂಚೋಳಿ ತಹಶೀಲ್ದಾರ ಕಚೇರಿಯಿಂದ ಆರಂಭಗೊಂಡು ತಾಂಡೂರ ಕ್ರಾಸ್, ಬಸವೇಶ್ವರ ವೃತ್ತ ನಂತರ ಚಿಂಚೋಳಿ ಬಸ್‍ನಿಲ್ದಾಣ ಹಾಗೂ ಬೀದರ್ ಕ್ರಾಸ್‍ನ ಡಾ|| ಬಿ ಆರ್ ಅಂಬೇಡ್ಕರ್ ವೃತ್ತದಿಂದ ಚಿಂಚೋಳಿ ಮುಖ್ಯ ರಸ್ತೆಯಲ್ಲಿ "ಮತದಾನ ನಮ್ಮ ಹಕ್ಕು ನಮ್ಮ ಶಕ್ತಿ" ಮತ್ತು "ಪ್ರಜಾಪ್ರಭುತ್ವ ನಮ್ಮಿಂದ ಮತದಾನ ಹೆಮ್ಮೆಯಿಂದ", ಮತದಾನಕ್ಕಿಂತ ಪವಿತ್ರ ಮತ್ತೋಂದಿಲ್ಲ. ನಾನು ಕಡ್ಡಾಯವಾಗಿ ಮತದಾನ ಮಾಡುತ್ತೇನೆ ಎಂಬ ಘೋಷಣೆಯೊಂದಿಗೆ ಜಾಥಾ ಹಮ್ಮಿಕೊಳ್ಳಲಾಯಿತು.

      ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಗ್ರೇಡ್-1 ಹಾಗೂ ಗ್ರೇಡ್-2, ಚಿಂಚೋಳಿ ತಹಶೀಲ್ದಾರರು ಮತದಾನ ಪ್ರತಿಜ್ಞಾ ವಿಧಿ  ಬೋಧಿಸಿದರು.

      ಈ ಸಂದರ್ಭದಲ್ಲಿ  ಕಂದಾಯ  ನಿರೀಕ್ಷಕರು, ತಾಲೂಕಿನ ಎಲ್ಲಾ ಪಿಡಿಓ, ಡಿಇಓ, ಬಿಲ್ ಕಲೆಕ್ಟರ್, ತಾಲೂಕು ಮತ್ತು ಗ್ರಾಮ ಪಂಚಾಯಿತಿಗಳ ಕಚೇರಿಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...