ಕೋವ್ಯಾಕ್ಸಿನ್ ಗೆ ವಾರಾಂತ್ಯದ ವೇಳೆಗೆ ಡಬ್ಲ್ಯುಹೆಚ್ಒ ಅನುಮೋದನೆ ನಿರೀಕ್ಷೆ

Source: Indian Express | By MV Bhatkal | Published on 13th September 2021, 11:47 PM | National News | Don't Miss |

ನವದೆಹಲಿ: ಕೊರೋನಾ ಲಸಿಕೆ ಕೋವ್ಯಾಕ್ಸಿನ್ ಗೆ ವಿಶ್ವಆರೋಗ್ಯ ಸಂಸ್ಥೆಯ ಅನುಮೋದನೆ ವಾರಾಂತ್ಯದಲ್ಲಿ ಲಭ್ಯವಾಗುವ ನಿರೀಕ್ಷೆ ಇದೆ.

ಕೋವ್ಯಾಕ್ಸಿನ್ ಭಾರತ್ ಬಯೋಟೆಕ್ ಸಂಸ್ಥೆ ತಯಾರಿಸುವ ಲಸಿಕೆಯಾಗಿದೆ. ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ಗಳನ್ನು ಸಂಸ್ಥೆ ಸಲ್ಲಿಸಿದ್ದು, ಔಷಧಗಳ ಗುಣಮಟ್ಟ ನಿಯಂತ್ರಕ  ಕೇಂದ್ರ ಸಂಸ್ಥೆಯ ವಿಷಯ ತಜ್ಞರ ಸಮಿತಿಗೆ ಸಲ್ಲಿಸಿರುವ ವರದಿಯಲ್ಲಿ ಶೇ.78 ರಷ್ಟು ಪರಿಣಾಮಕಾರಿತ್ವವನ್ನು ಸಂಸ್ಥೆ ತೋರಿಸಿದೆ.

ಜೂನ್ ತಿಂಗಳಲ್ಲಿ ಲಸಿಕೆಯ ಡಬ್ಲ್ಯುಹೆಚ್ಒ ತುರ್ತು ಬಳಕೆ ಪಟ್ಟಿ ಪ್ರಕ್ರಿಯೆ ವರದಿ ಸಲ್ಲಿಕೆ ಪೂರ್ವಭಾವಿ ಸಭೆ ನಡೆಸಲಾಗಿತ್ತು. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಈ ಹಿಂದೆ ಡಬ್ಲ್ಯುಹೆಚ್ಒ ಮುಖ್ಯ ವಿಜ್ಞಾನಿ ಡಾ ಸೌಮ್ಯಾ ಸ್ವಾಮಿನಾಥನ್ ಅವರನ್ನು ಭೇಟಿ ಮಾಡಿ ಕೋವ್ಯಾಕ್ಸಿನ್ ಅನುಮೋದನೆ ವಿಷಯದ ಬಗ್ಗೆ ಚರ್ಚಿಸಿದ್ದರು.

ಡಬ್ಲ್ಯುಹೆಚ್ಒ ಲಸಿಕೆ ವಿಭಾಗದ ಸಹಾಯಕ ಮಹಾನಿರ್ದೇಶಕರಾದ ಮರಿಯಾನ್ನೆ ಸಿಮಾವೊ ಈ ಲಸಿಕೆಗೆ ವಿಶ್ವಸಂಸ್ಥೆ ಮೌಲ್ಯಮಾಪನ ಸಾಕಷ್ಟು ಮುಂದುವರಿದಿದ್ದು ಸೆಪ್ಟೆಂಬರ್ ಮಧ್ಯಭಾಗದಲ್ಲಿ ನಿರ್ಧಾರ ಪ್ರಕಟವಾಗುವ ಸಾಧ್ಯತೆಯನ್ನು ಅಧಿಕಾರಿಗಳು ನಿರೀಕ್ಷಿಸುತ್ತಿದ್ದಾರೆ. ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಕೋವ್ಯಾಕ್ಸಿನ್ ನ್ನು ಅಭಿವೃದ್ಧಿಪಡಿಸಿದ್ದು, ಇದಕ್ಕೆ ಐಸಿಎಂಆರ್, ರಾಷ್ಟ್ರೀಯ ವೈರಾಲಜಿ ಇನ್ಸ್ಟಿಟ್ಯೂಟ್ ಸಹಯೋಗವಿದೆ.

Read These Next

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...